<p><strong>ಶಿರಸಿ:</strong>ಅಡಿಕೆ, ಕಾಳುಮೆಣಸು ಬೆಳೆಗೆ ತಗುಲಿದ ಕೊಳೆರೋಗಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತರ ಬೃಹತ್ ಸಭೆ ಶನಿವಾರ ನಡೆಯಿತು.</p>.<p>ಕೊಳೆರೋಗ ಬಂದು ಅಡಿಕೆ ಬೆಳೆ ಕೈ ಕಚ್ಚಿದೆ, ಕಾಳುಮೆಣಸು ಬಳ್ಳಿ ಇನ್ನು 4-5 ವರ್ಷ ಬೆಳೆ ಬರದಷ್ಟು ಸೊರಗಿದೆ ಎಂದು ರೈತರು ಅಭಿಪ್ರಾಯಪಟ್ಟರು.</p>.<p><strong>ವಿಜ್ಞಾನಿಗಳು ವಿಫಲ</strong></p>.<p>ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ಅಡಿಕೆಗೆ ಬಂದಿರುವ ರೋಗ ತಡೆಗಟ್ಟಲು ನಿರ್ದಿಷ್ಟ ಔಷಧ ಕಂಡುಹಿಡಿಯಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಟಿಎಸ್ ಎಸ್ ಅಧ್ಯಕ್ಷ ಶಾಂತಾರಾಮ ಹೆಗಡೆ, ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಭಾಸ್ಕರ ಹೆಗಡೆ, ಪ್ರಮುಖರಾದ ಜಿ.ಎನ್. ಹೆಗಡೆ, ಭೀಮಣ್ಣ ನಾಯ್ಕ ಉಪಸ್ಥಿತರಿದ್ದರು.</p>.<p>ಸಭೆಯ ನಂತರ ರೈತರು ಮೆರವಣಿಗೆಯಲ್ಲಿ ಸಾಗಿ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಎಲ್ಲ ಪ್ರಮುಖ ಪಕ್ಷಗಳ ಮುಖಂಡರು ಭಾಗಿಯಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿರಸಿ:</strong>ಅಡಿಕೆ, ಕಾಳುಮೆಣಸು ಬೆಳೆಗೆ ತಗುಲಿದ ಕೊಳೆರೋಗಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತರ ಬೃಹತ್ ಸಭೆ ಶನಿವಾರ ನಡೆಯಿತು.</p>.<p>ಕೊಳೆರೋಗ ಬಂದು ಅಡಿಕೆ ಬೆಳೆ ಕೈ ಕಚ್ಚಿದೆ, ಕಾಳುಮೆಣಸು ಬಳ್ಳಿ ಇನ್ನು 4-5 ವರ್ಷ ಬೆಳೆ ಬರದಷ್ಟು ಸೊರಗಿದೆ ಎಂದು ರೈತರು ಅಭಿಪ್ರಾಯಪಟ್ಟರು.</p>.<p><strong>ವಿಜ್ಞಾನಿಗಳು ವಿಫಲ</strong></p>.<p>ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ಅಡಿಕೆಗೆ ಬಂದಿರುವ ರೋಗ ತಡೆಗಟ್ಟಲು ನಿರ್ದಿಷ್ಟ ಔಷಧ ಕಂಡುಹಿಡಿಯಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಟಿಎಸ್ ಎಸ್ ಅಧ್ಯಕ್ಷ ಶಾಂತಾರಾಮ ಹೆಗಡೆ, ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಭಾಸ್ಕರ ಹೆಗಡೆ, ಪ್ರಮುಖರಾದ ಜಿ.ಎನ್. ಹೆಗಡೆ, ಭೀಮಣ್ಣ ನಾಯ್ಕ ಉಪಸ್ಥಿತರಿದ್ದರು.</p>.<p>ಸಭೆಯ ನಂತರ ರೈತರು ಮೆರವಣಿಗೆಯಲ್ಲಿ ಸಾಗಿ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಎಲ್ಲ ಪ್ರಮುಖ ಪಕ್ಷಗಳ ಮುಖಂಡರು ಭಾಗಿಯಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>