<p><strong>ಶಿರಸಿ: </strong>ಅಡಿಕೆಯಿಂದ ಚಹಾ ಸೇರಿದಂತೆ ಹಲವು ಉತ್ಪನ್ನ ಸಿದ್ಧವಾಗುತ್ತಿದೆ. ಅದರಲ್ಲಿ ಮಧುಮೇಹ ನಿಯಂತ್ರಿಸುವ ಅಂಶಗಳೂ ಇವೆ, ಹೀಗಾಗಿ ಬೆಳೆಗಾರರು ಅಡಿಕೆ ಬಗ್ಗೆಯ ಆಕ್ಷೇಪಗಳ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ತೋಟಗಾರಿಕಾ ಇಲಾಖೆ ಸಚಿವ ಆರ್.ಶಂಕರ್ ಹೇಳಿದರು.</p>.<p>ನಗರದ ಮಾರಿಕಾಂಬಾ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಮಾಧ್ಯಮದವರೊಡನೆ ಮಾತನಾಡಿದ ಅವರು, 'ಅಡಿಕೆಗೆ ಸದ್ಯ ಉತ್ತಮ ದರವಿದೆ. ರೈತರು ಸಂತಸದಲ್ಲಿದ್ದಾರೆ. ತೋಟಗಾರಿಕೆ ಬೆಳೆಗಳ ಹಾನಿಗೆ ಹಂತ ಹಂತವಾಗಿ ಪರಿಹಾರ ನೀಡಲಾಗಿದೆ' ಎಂದರು.</p>.<p>'ರೇಷ್ಮೆ ಇಲಾಖೆಯನ್ನು ಬೇರೆ ಇಲಾಖೆ ಜತೆ ವಿಲೀನಗೊಳಿಸುವ ಪ್ರಸ್ತಾಪವಿಲ್ಲ. ಬೇರೆ ಬೇರೆ ಇಲಾಖೆಗೆ ತೆರಳಿರುವ ರೇಷ್ಮೆ ಇಲಾಖೆ ನೌಕರರನ್ನು ಮಾತೃ ಇಲಾಖೆಗೆ ಕರೆತರಲಾಗುವುದು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಅಡಿಕೆಯಿಂದ ಚಹಾ ಸೇರಿದಂತೆ ಹಲವು ಉತ್ಪನ್ನ ಸಿದ್ಧವಾಗುತ್ತಿದೆ. ಅದರಲ್ಲಿ ಮಧುಮೇಹ ನಿಯಂತ್ರಿಸುವ ಅಂಶಗಳೂ ಇವೆ, ಹೀಗಾಗಿ ಬೆಳೆಗಾರರು ಅಡಿಕೆ ಬಗ್ಗೆಯ ಆಕ್ಷೇಪಗಳ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ತೋಟಗಾರಿಕಾ ಇಲಾಖೆ ಸಚಿವ ಆರ್.ಶಂಕರ್ ಹೇಳಿದರು.</p>.<p>ನಗರದ ಮಾರಿಕಾಂಬಾ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಮಾಧ್ಯಮದವರೊಡನೆ ಮಾತನಾಡಿದ ಅವರು, 'ಅಡಿಕೆಗೆ ಸದ್ಯ ಉತ್ತಮ ದರವಿದೆ. ರೈತರು ಸಂತಸದಲ್ಲಿದ್ದಾರೆ. ತೋಟಗಾರಿಕೆ ಬೆಳೆಗಳ ಹಾನಿಗೆ ಹಂತ ಹಂತವಾಗಿ ಪರಿಹಾರ ನೀಡಲಾಗಿದೆ' ಎಂದರು.</p>.<p>'ರೇಷ್ಮೆ ಇಲಾಖೆಯನ್ನು ಬೇರೆ ಇಲಾಖೆ ಜತೆ ವಿಲೀನಗೊಳಿಸುವ ಪ್ರಸ್ತಾಪವಿಲ್ಲ. ಬೇರೆ ಬೇರೆ ಇಲಾಖೆಗೆ ತೆರಳಿರುವ ರೇಷ್ಮೆ ಇಲಾಖೆ ನೌಕರರನ್ನು ಮಾತೃ ಇಲಾಖೆಗೆ ಕರೆತರಲಾಗುವುದು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>