ನ.13ರಂದು ಉಡುಪಿಯಿಂದ ಮುಂಬೈಗೆ ಹವಾನಿಯಂತ್ರಿತ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ವನಿತಾ ದಿವಾಕರ ಎಂಬುವವರ ಕೈಚೀಲ ಕಳವಾಗಿತ್ತು. ಅದರಲ್ಲಿ ರೂ.2.20 ಲಕ್ಷ ಮೌಲ್ಯದ ಚಿನ್ನಾಭರಣ, ಪರ್ಸ್, ಎ.ಟಿ.ಎಂ ಕಾರ್ಡ್ ಹಾಗೂ ಇತರ ದಾಖಲೆಗಳಿದ್ದವು. ಈ ಬಗ್ಗೆ ಅವರು ರೈಲಿನ ಟಿಕೆಟ್ ಪರಿಶೀಲನಾಧಿಕಾರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು. ಅದನ್ನು ಆಧರಿಸಿ ಮಡಗಾಂವ್ ನ ರೈಲ್ವೆ ಭದ್ರತಾ ದಳದ ಅಪರಾಧ ವಿಭಾಗದ ಇನ್ ಸ್ಪೆಕ್ಟರ್ ವಿನೋದ್ ಕುಮಾರ್, ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಿದರು.