ಶುಕ್ರವಾರ ತಾಲ್ಲೂಕು ವೈದ್ಯಾಧಿಕಾರಿ ಕಚೇರಿಯ ಬಳಿ ಸೇರಿದ್ದ ಸಂಘಟನೆ ಪ್ರಮುಖರು, ವೈದ್ಯ ಸತೀಶ ಭಟ್ಕಳ ಅವರಿಗೆ ಮನವಿ ಸಲ್ಲಿಸಿದರು. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಜೂನ್ 30ರಂದುರಾಜ್ಯವ್ಯಾಪಿ ಆಶಾ ಕಾರ್ಯಕರ್ತೆಯರು ಮನವಿ ಸಲ್ಲಿಸಿದ್ದರು. ಸರ್ಕಾರ ಈ ಬಗ್ಗೆ ಸ್ಪಂದಿಸದ ಕಾರಣ, ಅನಿರ್ದಿಷ್ಟಾವಧಿ ಕಾರ್ಯ ಸ್ಥಗಿತಗೊಳಿಸಿ, ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.