‘ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಸಹಿತ ಅನೇಕ ಮುಖಂಡರು, ಕಾರ್ಯಕರ್ತರು ವರ್ಷದ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷವು ತಳಮಟ್ಟದಲ್ಲಿ ಸಂಘಟನೆಗೆ ಹೆಚ್ಚು ಶ್ರಮ ವಹಿಸಬೇಕಾಗಿದೆ. ತಾಲ್ಲೂಕಿನ ಹಳ್ಳಿ ಗದ್ದುಗೆಯಲ್ಲಿ ಇಲ್ಲಿಯವರೆಗೂ ಕಾಂಗ್ರೆಸ್ ಪಕ್ಷದ್ದೇ ‘ಕೈ’ ಮೇಲಾಗಿತ್ತು. ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಿಂದ, ಈ ಸಲದ ಪಂಚಾಯ್ತಿ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಅಗ್ನಿ ಪರೀಕ್ಷೆ ಆಗಿದೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಭಿಪ್ರಾಯಪಡುತ್ತಾರೆ.