ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಶಾಂತಿ ಇರುವುದು ಕುಮಾರಸ್ವಾಮಿಗೆ ಸಮಾಧಾನ ತಂದಿಲ್ಲ. ಹೀಗಾಗಿ ಪೊಲೀಸರ ಮೇಲೆ ಸಹ ಅವರು ಆಪಾದನೆ ಮಾಡುತ್ತಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣದ ಸಂಬಂಧ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಪೊಲೀಸರೇ ಇದನ್ನು ಸೃಷ್ಟಿಸಿದ್ದಾರೆ ಎನ್ನುವ ಮೂಲಕ ನೀಚತನಕ್ಕೆ ಇಳಿದಿದ್ದಾರೆ’ ಎಂದರು.