ಜರ್ಮನ್ ಬೇಕರಿ ಬಾಂಬ್ ಸ್ಫೋಟದಲ್ಲಿ 17 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿದ್ದರು. ಈ ಕೃತ್ಯದಲ್ಲಿ ಉಗ್ರವಾದಿ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಕೈವಾಡವು ತನಿಖೆಯಿಂದ ಗೊತ್ತಾಗಿತ್ತು. ಇದರ ಕಮಾಂಡರ್ಗಳಾಗಿರುವ ರಿಯಾಜ್ ಭಟ್ಕಳ ಮತ್ತು ಸಹೋದರ ಇಕ್ಬಾಲ್ ಭಟ್ಕಳ, ಸ್ಫೋಟದ ನಂತರ ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.