ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕಿನೊಂದಿಗೆ ಕರ್ತವ್ಯ ನೆನಪಿನಲ್ಲಿರುವುದು ಮುಖ್ಯ: ಸಚಿವ ಶ್ರೀನಿವಾಸ‌ ಪೂಜಾರಿ

Last Updated 15 ಆಗಸ್ಟ್ 2022, 5:29 IST
ಅಕ್ಷರ ಗಾತ್ರ

ಕಾರವಾರ: ದೇಶದ 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ‌ ಪೂಜಾರಿ, ನಗರದಲ್ಲಿ ಸೋಮವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ವಿವಿಧ 15 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, 'ಭಾರತದ ಪ್ರತಿಯೊಬ್ಬನೂ ಭಾರತೀಯ ಪ್ರಜೆ. ಈ ದೇಶದಲ್ಲಿ ಸರ್ವರಲ್ಲಿ ಒಂದಾಗಿ ಬದುಕುವ ಹಕ್ಕಿದೆ. ಕೆಲವು ಕರ್ತವ್ಯಗಳೂ ಅವನ ಜವಾಬ್ದಾರಿ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು' ಎಂದು ಹೇಳಿದರು. ‌

ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇದೇವೇಳೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸಚಿವರು ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT