‘ಬಾಲಭವನಕ್ಕೆ ಸೇರುವ ಮಕ್ಕಳ ಸಂಖ್ಯೆ ಹೆಚ್ಚಾದರೆ ಪ್ರತಿ ತಾಲ್ಲೂಕಿನಲ್ಲಿ ಭವನ ನಿರ್ಮಿಸಲು ಚಿಂತಿಸಲಾಗುವುದು. ಆರ್ಥಿಕವಾಗಿ ಹಿಂದುಳಿದ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಬಾಲವೇದಿಕೆ, ವಾರಾಂತ್ಯ ಕಾರ್ಯಕ್ರಮ, ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಗುವುದು. ಈ ಮೂಲಕ ಮಕ್ಕಳ ಪ್ರತಿಭೆಗಳನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ತಲುಪುವಂತೆ ಮಾಡುವುದು ಸರ್ಕಾರದ ಧ್ಯೇಯವಾಗಿದೆ’ ಎಂದರು.