ಕಾರ್ಗಿಲ್ ಯುದ್ಧ ನಡೆದ ವರ್ಷದಿಂದ ಕೃಷ್ಣನಿಗೆ ತುಳಸಿ ಅರ್ಚನೆ ಪದ್ಧತಿ ಪ್ರತಿವರ್ಷ ಕೃಷ್ಣಾಷ್ಟಮಿಯಲ್ಲಿ ನಡೆದುಕೊಂಡು ಬರುತ್ತಿದೆ. ದೇಶದ ಯೋಧರಿಗೆ ತಮ್ಮ ಕಾರ್ಯಚಟುವಟಿಕೆಯಲ್ಲಿ ಹೆಚ್ಚಿನ ಧೈರ್ಯ, ಸ್ಥೈರ್ಯ, ಸಾಮರ್ಥ್ಯ ದೊರೆಯಲೆಂದು ಪ್ರಾರ್ಥಿಸಿ, ವಿಶೇಷ ಪೂಜೆಯನ್ನು ಕೃಷ್ಣನಿಗೆ ಸಮರ್ಪಿಸಲಾಗುತ್ತದೆ. ಕೇಶವ ಹೆಗಡೆ ದಂಪತಿ ಯಜಮಾನರಾಗಿ ಪೂಜೆ ನೆರವೇರಿಸಿದರು.