ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೊಯಿಡಾದಲ್ಲಿ ಕರಡಿ ದಾಳಿ: ವ್ಯಕ್ತಿಗೆ ತೀವ್ರ ಗಾಯ

Last Updated 14 ಜೂನ್ 2021, 8:34 IST
ಅಕ್ಷರ ಗಾತ್ರ

ಜೊಯಿಡಾ: ಹಲಸಿನ ಮರದ ಮೇಲಿದ್ದ ಕರಡಿಯೊಂದು ದನ ಮೇಯಿಸಿ ಬರುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಭಾನುವಾರ ಸಂಜೆ ದಾಳಿ ಮಾಡಿ ತೀವ್ರ ಗಾಯಗೊಳಿಸಿದೆ.

ತಾಲ್ಲೂಕಿನ ಬಾಜರಕುಣಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿರಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ವ್ಯಕ್ತಿಯನ್ನು ಅರಣ್ಯ ಇಲಾಖೆಯವರು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ವಿಜಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿರಲ ಗ್ರಾಮದ ಸೋಮಾ ಶಂಕರ ಗಾವಡೆ (55) ಗಾಯಗೊಂಡವರು. ಮನೆಯ ಹತ್ತಿರದಲ್ಲೇ ಇರುವ ಗದ್ದೆಯಲ್ಲಿ ದನಗಳನ್ನು ಮೇಯಿಸಿ ಮನೆಗೆ ಮರಳುತ್ತಿದ್ದ ವೇಳೆ ದಾರಿಯ ಹಲಸಿನ ಮರದ ಮೇಲಿದ್ದ ಕರಡಿಯೊಂದು ಅವರ ಮೇಲೆ ಹಾರಿ ದಾಳಿ ಮಾಡಿತು. ಅವರ ಜೊತೆಯಲ್ಲಿದ್ದ ವ್ಯಕ್ತಿಯೊಬ್ಬ ಊರ ಜನರ ನೆರವಿನಿಂದ ಗಾಯಗೊಂಡ ವ್ಯಕ್ತಿಯನ್ನು ಕ್ಯಾಸಲ್ ರಾಕ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿ ಚಿಕಿತ್ಸೆ ನೀಡಿದ್ದಾರೆ. ನಂತರ ಕ್ಯಾಸಲ್ ರಾಕ್ ವಲಯ ಅರಣ್ಯಾಧಿಕಾರಿಯವರ ವಾಹನದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಅರಣ್ಯ ಇಲಾಖೆಯವರು ದಾಖಲಿಸಿದ್ದಾರೆ.

ಗಾಯಾಳು ವ್ಯಕ್ತಿಯ ಚಿಕಿತ್ಸಾ ವೆಚ್ಚವನ್ನು ಹಾಗೂ ವ್ಯಕ್ತಿಗೆ ಸೂಕ್ತ ಪರಿಹಾರವನ್ನು ಅರಣ್ಯ ಇಲಾಖೆಯಿಂದ ನೀಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎಸ್.ಎಸ್.ಕಳ್ಳಿಮಠ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT