ಶುಕ್ರವಾರ ಸೋಂಕು ದೃಢಪಟ್ಟಿರುವ ಕುರಿತು ಮಾಹಿತಿ ನೀಡಲು ಮುಂದಾದಾಗ, ಸಣ್ಣ ಕೆಲಸ ಇದ್ದಿದ್ದರಿಂದ, ಮುಗಿಸಿಕೊಂಡು ಮರಳಿ ಬೆಂಗಳೂರಿಗೆ ಬಂದು, ತನ್ನ ಕುಟುಂಬದ ಜೊತೆ ಇದ್ದಿದ್ದಾಗಿ ಆ ವ್ಯಕ್ತಿ ಪ್ರತಿಕ್ರಿಯಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ತಹಶೀಲ್ದಾರ್ ಶ್ರೀಧರ ಮುಂದಲಮನಿ, ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿ, ಆಸ್ಪತ್ರೆಗೆ ದಾಖಲಾಗಲು ಅಗತ್ಯ ಮಾಹಿತಿಯನ್ನು ಕಳುಹಿಸಿದ್ದಾರೆ.