ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣ: ಸಮುದ್ರದಲ್ಲಿ ಮುಳುಗಿ ಯುವಕ ನಾಪತ್ತೆ- ಮತ್ತೊಬ್ಬರ ರಕ್ಷಣೆ

Last Updated 9 ಆಗಸ್ಟ್ 2021, 4:42 IST
ಅಕ್ಷರ ಗಾತ್ರ

ಗೋಕರ್ಣ: ಇಲ್ಲಿಯ ಮೇನ್ ಬೀಚ್‌ನಲ್ಲಿ ಸೋಮವಾರ ಬೆಳಿಗ್ಗೆ ಈಜಾಡಲು ತೆರಳಿದ ಯುವಕ ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ. ಮತ್ತೊಬ್ಬರನ್ನು ರಕ್ಷಣೆ ಮಾಡಲಾಗಿದೆ.

ನಾಪತ್ತೆಯಾದವರನ್ನು ಬೆಂಗಳೂರಿನ ಬಿ.ಟಿ.ಎಂ ಬಡಾವಣೆ ನಿವಾಸಿ ಅರುಣ ಲಕ್ಕಪ್ಪ (22) ಎಂದು ಗುರುತಿಸಲಾಗಿದೆ. ಒಟ್ಟು ಎಂಟು ಯುವಕರು ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಅಲೆಗಳು ಅಪಾಯಕಾರಿಯಾಗಿರುವ ಬಗ್ಗೆ ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿ ಈಜಾಡಲು ನೀರಿಗೆ ಇಳಿದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಗೋಕರ್ಣ ಪಿ.ಎಸ್.ಐ ನವೀನ್ ನಾಯ್ಕ ಸ್ಥಳದಲ್ಲಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT