<p><strong>ಶಿರಸಿ:</strong> ಕೃಷಿ ತಿದ್ದುಪಡಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ಒತ್ತಾಯಿಸಿ ಕರೆ ನೀಡಲಾಗಿದ್ದ ಬಂದ್ ಗೆ ನಗರದಲ್ಲಿ ಸ್ಪಂದನೆ ಸಿಗಲಿಲ್ಲ. ಅಂಗಡಿ ಮುಂಗಟ್ಟುಗಳು ತೆರದಿದ್ದವು. ಸಂಚಾರ ಸಹಜವಾಗಿತ್ತು.</p>.<p>ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕ ಮತ್ತು ಸಿಐಟಿಯು ಜಂಟಿಯಾಗಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು.</p>.<p>ಇಲ್ಲಿನ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಕೆಲಹೊತ್ತು ಪ್ರತಿಭಟಿಸಲಾಯಿತು. ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ರಸ್ತೆ ತಡೆ ನಡೆಸಲಾಯಿತು. ಬಸ್, ಇನ್ನಿತರ ವಾಹನಗಳ ಸಂಚಾರಕ್ಕೆ ಕೆಲಹೊತ್ತು ಅಡ್ಡಿ ಆಗಿತ್ತು.</p>.<p>'ಸರ್ಕಾರ ಎಚ್ಚೆತ್ತುಕೊಂಡು ರೈತರ ಬೇಡಿಕೆ ಸ್ಪಂದಿಸದಿದ್ದರೆ ಪ್ರತಿ ಜಿಲ್ಲೆಯಲ್ಲಿ ದೆಹಲಿ ಮಾದರಿ ಹೆದ್ದಾರಿ ತಡೆ ನಡೆಸಲಾಗುವದು' ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕಿರವತ್ತಿ ಎಚ್ಚರಿಸಿದರು</p>.<p>'ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದು ಹೈನುಗಾರಿಕೆಯನ್ನೂ ಕಾರ್ಪೊರೇಟ್ ವಲಯಕ್ಕೆ ನೀಡಲು ಹೊರಟಿದೆ. ಸರ್ಕಾರ ಪ್ರತಿ ಹಂತದಲ್ಲೂ ರೈತರ ಹಕ್ಕು ಕಸಿಯುತ್ತಿದೆ' ಎಂದು ಆರೋಪಿಸಿದರು.</p>.<p>ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ, 'ದೇಶದ ಪ್ರಧಾನಿಗೆ ರೈತರ ಸಂಕಷ್ಟ ಆಲಿಸುವ ವ್ಯವಧಾನವಿಲ್ಲ. ರೈತರು, ಕಾರ್ಮಿಕರ ಹೋರಾಟಕ್ಕೆ ಯಾವ ಸರ್ಕಾರಗಳೂ ಸ್ಪಂದಿಸುತ್ತಿಲ್ಲ' ಎಂದರು.</p>.<p>'ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ, ವಿದ್ಯುತ್ ಮಸೂದೆಗಳು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಪ್ರಜಾಪ್ರಭುತ್ವ ಉಳಿಸಲು ಮಸೂದೆ ಹಿಂಪಡೆಯಿರಿ' ಎಂದು ಒತ್ತಾಯಿಸಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗಪ್ಪ ನಾಯ್ಕ, ಹಸಿರುಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ನಾಯ್ಕ, ರೈತ ಸಂಘದ ಪ್ರಮೋದ ಜಕ್ಕಣ್ಣನವರ್, ಧಾಕಪ್ಪ ಮಡಿವಾಳ, ದೀಪಕ ಶೇಟ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಕೃಷಿ ತಿದ್ದುಪಡಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ಒತ್ತಾಯಿಸಿ ಕರೆ ನೀಡಲಾಗಿದ್ದ ಬಂದ್ ಗೆ ನಗರದಲ್ಲಿ ಸ್ಪಂದನೆ ಸಿಗಲಿಲ್ಲ. ಅಂಗಡಿ ಮುಂಗಟ್ಟುಗಳು ತೆರದಿದ್ದವು. ಸಂಚಾರ ಸಹಜವಾಗಿತ್ತು.</p>.<p>ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕ ಮತ್ತು ಸಿಐಟಿಯು ಜಂಟಿಯಾಗಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು.</p>.<p>ಇಲ್ಲಿನ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಕೆಲಹೊತ್ತು ಪ್ರತಿಭಟಿಸಲಾಯಿತು. ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ರಸ್ತೆ ತಡೆ ನಡೆಸಲಾಯಿತು. ಬಸ್, ಇನ್ನಿತರ ವಾಹನಗಳ ಸಂಚಾರಕ್ಕೆ ಕೆಲಹೊತ್ತು ಅಡ್ಡಿ ಆಗಿತ್ತು.</p>.<p>'ಸರ್ಕಾರ ಎಚ್ಚೆತ್ತುಕೊಂಡು ರೈತರ ಬೇಡಿಕೆ ಸ್ಪಂದಿಸದಿದ್ದರೆ ಪ್ರತಿ ಜಿಲ್ಲೆಯಲ್ಲಿ ದೆಹಲಿ ಮಾದರಿ ಹೆದ್ದಾರಿ ತಡೆ ನಡೆಸಲಾಗುವದು' ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕಿರವತ್ತಿ ಎಚ್ಚರಿಸಿದರು</p>.<p>'ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದು ಹೈನುಗಾರಿಕೆಯನ್ನೂ ಕಾರ್ಪೊರೇಟ್ ವಲಯಕ್ಕೆ ನೀಡಲು ಹೊರಟಿದೆ. ಸರ್ಕಾರ ಪ್ರತಿ ಹಂತದಲ್ಲೂ ರೈತರ ಹಕ್ಕು ಕಸಿಯುತ್ತಿದೆ' ಎಂದು ಆರೋಪಿಸಿದರು.</p>.<p>ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ, 'ದೇಶದ ಪ್ರಧಾನಿಗೆ ರೈತರ ಸಂಕಷ್ಟ ಆಲಿಸುವ ವ್ಯವಧಾನವಿಲ್ಲ. ರೈತರು, ಕಾರ್ಮಿಕರ ಹೋರಾಟಕ್ಕೆ ಯಾವ ಸರ್ಕಾರಗಳೂ ಸ್ಪಂದಿಸುತ್ತಿಲ್ಲ' ಎಂದರು.</p>.<p>'ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ, ವಿದ್ಯುತ್ ಮಸೂದೆಗಳು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಪ್ರಜಾಪ್ರಭುತ್ವ ಉಳಿಸಲು ಮಸೂದೆ ಹಿಂಪಡೆಯಿರಿ' ಎಂದು ಒತ್ತಾಯಿಸಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗಪ್ಪ ನಾಯ್ಕ, ಹಸಿರುಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ನಾಯ್ಕ, ರೈತ ಸಂಘದ ಪ್ರಮೋದ ಜಕ್ಕಣ್ಣನವರ್, ಧಾಕಪ್ಪ ಮಡಿವಾಳ, ದೀಪಕ ಶೇಟ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>