ಸಂಧಾನದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಪಕ್ಷದ ತೀರ್ಮಾನಕ್ಕೆ ಬದ್ಧನಿದ್ದು, ಗಣಪತಿ ಉಳ್ವೇಕರ್ ಅವರ ಗೆಲುವಿಗಾಗಿ ದುಡಿಯುತ್ತೇನೆ. ಅಂಕೋಲಾ ತಾಲ್ಲೂಕಿನಲ್ಲಿ ಪಕ್ಷದ ಹೊಣೆ ವಹಿಸಿಕೊಳ್ಳುತ್ತೇನೆ. ನ.23ರಂದು ಕಾರವಾರದಲ್ಲಿ ಗಣಪತಿ ಅವರ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಜೊತೆಗಿರುತ್ತೇನೆ’ ಎಂದು ಭರವಸೆ ನೀಡಿದರು.