<p><strong>ಶಿರಸಿ</strong>: ಅತಿವೃಷ್ಟಿಯಿಂದ ಹಾನಿಗೊಳಗಾದ ಶಿರಸಿ, ಸಿದ್ದಾಪುರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಭೇಟಿ ನೀಡುತ್ತಿದ್ದಾರೆ.</p>.<p>ತಾಲ್ಲೂಕಿನ ರೇವಣಕಟ್ಟಾ, ದೇವನಳ್ಳಿ, ಚಿಂಚಳಿಕೆ, ಮತ್ತಿಘಟ್ಟ, ಮೊಗವಳ್ಳಿ, ಬನವಾಸಿ, ಸಿದ್ದಾಪುರ ತಾಲ್ಲೂಕಿನ ಮುರೂರು, ಕಾನಸೂರು, ಮುಠ್ಠಳ್ಳಿ, ಹೆಮ್ಮನಬೈಲ್ ಸೇರಿದಂತೆ ವಿವಿಧ ಗ್ರಾಮಗಳಿಗೆ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.</p>.<p>ಮಳೆಯಿಂದ ಜಲಾವೃತಗೊಂಡು ಹಾನಿಗೀಡಾದ ಕೃಷಿಭೂಮಿ, ಕುಸಿದ ಮನೆ, ಧರೆ ಕುಸಿತ ಮುಂತಾದ ಹಾನಿಗಳನ್ನು ಪರಿಶೀಲಿಸಿದರು. ಹಲವು ಸಂತ್ರಸ್ತರಿಗೆ ಸ್ವಂತ ವೆಚ್ಚದಲ್ಲಿ ನೆರವು ಒದಗಿಸಿದರು. ತಾತ್ಕಾಲಿಕ ಸೂರು ನಿರ್ಮಿಸಿಕೊಡುವ ಭರವಸೆಯನ್ನೂ ನೀಡಿದರು.</p>.<p>‘ಪ್ರಕೃತಿ ವಿಕೋಪದಿಂದ ಕಂಗೆಟ್ಟಿರುವ ಜನರಿಗೆ ಧೈರ್ಯ ತುಂಬುವ ಕೆಲಸವಾಗಬೇಕು.ಜನರ ಕಷ್ಟದ ಸಮಯದಲ್ಲಿ ಅವರೊಂದಿಗೆ ನಿಂತಿದ್ದೇವೆ. ಮಳೆಯಿಂದ ಸೂರು ಕಳಕೊಂಡವರಿಗೆ ಮನೆ ನಿರ್ಮಿಸಿಕೊಡಬೇಕು. ನಷ್ಟವಾದ ಜಾನುವಾರು, ಕೃಷಿಭೂಮಿ, ಬೆಳೆಗೆ ಸರ್ಕಾರ ಶೀಘ್ರ ಪರಿಹಾರ ಒದಗಿಸಬೇಕು’ ಎಂದು ಭೀಮಣ್ಣ ನಾಯ್ಕ ಹೇಳಿದರು.</p>.<p>ಪ್ರಮುಖರಾದ ಎಸ್.ಕೆ.ಭಾಗವತ, ಬಸವರಾಜ ದೊಡ್ಮನಿ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಅತಿವೃಷ್ಟಿಯಿಂದ ಹಾನಿಗೊಳಗಾದ ಶಿರಸಿ, ಸಿದ್ದಾಪುರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಭೇಟಿ ನೀಡುತ್ತಿದ್ದಾರೆ.</p>.<p>ತಾಲ್ಲೂಕಿನ ರೇವಣಕಟ್ಟಾ, ದೇವನಳ್ಳಿ, ಚಿಂಚಳಿಕೆ, ಮತ್ತಿಘಟ್ಟ, ಮೊಗವಳ್ಳಿ, ಬನವಾಸಿ, ಸಿದ್ದಾಪುರ ತಾಲ್ಲೂಕಿನ ಮುರೂರು, ಕಾನಸೂರು, ಮುಠ್ಠಳ್ಳಿ, ಹೆಮ್ಮನಬೈಲ್ ಸೇರಿದಂತೆ ವಿವಿಧ ಗ್ರಾಮಗಳಿಗೆ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.</p>.<p>ಮಳೆಯಿಂದ ಜಲಾವೃತಗೊಂಡು ಹಾನಿಗೀಡಾದ ಕೃಷಿಭೂಮಿ, ಕುಸಿದ ಮನೆ, ಧರೆ ಕುಸಿತ ಮುಂತಾದ ಹಾನಿಗಳನ್ನು ಪರಿಶೀಲಿಸಿದರು. ಹಲವು ಸಂತ್ರಸ್ತರಿಗೆ ಸ್ವಂತ ವೆಚ್ಚದಲ್ಲಿ ನೆರವು ಒದಗಿಸಿದರು. ತಾತ್ಕಾಲಿಕ ಸೂರು ನಿರ್ಮಿಸಿಕೊಡುವ ಭರವಸೆಯನ್ನೂ ನೀಡಿದರು.</p>.<p>‘ಪ್ರಕೃತಿ ವಿಕೋಪದಿಂದ ಕಂಗೆಟ್ಟಿರುವ ಜನರಿಗೆ ಧೈರ್ಯ ತುಂಬುವ ಕೆಲಸವಾಗಬೇಕು.ಜನರ ಕಷ್ಟದ ಸಮಯದಲ್ಲಿ ಅವರೊಂದಿಗೆ ನಿಂತಿದ್ದೇವೆ. ಮಳೆಯಿಂದ ಸೂರು ಕಳಕೊಂಡವರಿಗೆ ಮನೆ ನಿರ್ಮಿಸಿಕೊಡಬೇಕು. ನಷ್ಟವಾದ ಜಾನುವಾರು, ಕೃಷಿಭೂಮಿ, ಬೆಳೆಗೆ ಸರ್ಕಾರ ಶೀಘ್ರ ಪರಿಹಾರ ಒದಗಿಸಬೇಕು’ ಎಂದು ಭೀಮಣ್ಣ ನಾಯ್ಕ ಹೇಳಿದರು.</p>.<p>ಪ್ರಮುಖರಾದ ಎಸ್.ಕೆ.ಭಾಗವತ, ಬಸವರಾಜ ದೊಡ್ಮನಿ ಇತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>