ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡುರಸ್ತೆಯಲ್ಲೇ ಸುಟ್ಟು ಕರಕಲಾದ ಬೈಕ್

Last Updated 14 ಅಕ್ಟೋಬರ್ 2019, 13:19 IST
ಅಕ್ಷರ ಗಾತ್ರ

ಕಾರವಾರ: ಸಿದ್ದಾಪುರ– ಕುಮಟಾ ರಸ್ತೆಯ ದೊಡ್ಮನೆ ಘಟ್ಟದ ಬಳಿ ಸೋಮವಾರ, ನಿಯಂತ್ರಣ ತಪ್ಪಿ ಬಿದ್ದ ಬೈಕ್ ಹೊತ್ತಿ ಉರಿಯಿತು. ಬೈಕ್ ಸವಾರ,ಜಿಲ್ಲಾ ಪಂಚಾಯತಿನಎಂಜಿನಿಯರ್ಮಣಿಕಂಠ ಪೂಜಾರಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದರು.

ಸಿದ್ದಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವಅವರು, ಹೊನ್ನಾವರ ತಾಲ್ಲೂಕಿನ ಕಡತೋಕದಿಂದ ಸಿದ್ದಾಪುರಕ್ಕೆ ಬಜಾಜ್ ವಿಕ್ರಾಂತ್ ಬೈಕ್‌ನಲ್ಲಿ ತೆರಳುತ್ತಿದ್ದರು.ಹುಲ್ದಾರ್ ಗದ್ದೆ ಬಳಿ ಸ್ಕಿಡ್ ಆಗಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿತು.
ವಿಷಯ ತಿಳಿದು ಸ್ಥಳೀಯರು ಬಂದುಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ದೊಡ್ಮನೆ ಘಟ್ಟವು ಕಿಡಿದಾದ ತಿರುವುಗಳಿಂದ ಕೂಡಿದ್ದು, ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈಗಾಗಲೇ ಹಲವು ಅಪಘಾತಗಳು ಸಂಭವಿಸಿದ್ದರೂರಸ್ತೆ ದುರಸ್ತಿಯಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT