ಜೀವವೈವಿಧ್ಯ ಸಂರಕ್ಷಣಾ ಜಾಗೃತಿ ಅಭಿಯಾನವು ವಿವಿಧ ಸಂಘ–ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಸಹಕಾರದಲ್ಲಿ ರಾಜ್ಯದಾದ್ಯಂತ ಮೇ 22ರಿಂದ ಜೂನ್ 5ರವರೆಗೆ ನಡೆಯಲಿದೆ. ವೃಕ್ಷಾರೋಪಣ, ಬೀಜದುಂಡೆ ತಯಾರಿ, ಕೆರೆ, ನದಿಮೂಲ ಸಮೀಕ್ಷೆ, ಸೂಕ್ಷ್ಮ ಜೀವವೈವಿಧ್ಯ ತಾಣಗಳ ಗುರುತಿಸುವಿಕೆ, ಔಷಧ ಸಸ್ಯವನ ನಿರ್ಮಾಣ, ವಿನಾಶದ ಅಂಚಿನ ಸೂಕ್ಷ್ಮ ಅರಣ್ಯ ಪ್ರದೇಶಗಳ ಸಮೀಕ್ಷೆ ಇತ್ಯಾದಿ ಕಾರ್ಯಚಟುವಟಿಕೆಗಳು ನಡೆಯಲಿವೆ. ಜೀವವೈವಿಧ್ಯ ಸೂಕ್ಷ್ಮ ತಾಣಗಳಿಗೆ ಭೇಟಿ, ಸಸ್ಯಗಣತಿ ವರದಿ, ಜೀವವೈವಿಧ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದವರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ನಡೆಯಲಿದೆ ಎಂದು ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ತಿಳಿಸಿದ್ದಾರೆ.