ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವನಕ್ರಮಕ್ಕೆ ಸನಾತನ ಪರಂಪರೆ ಮಾರ್ಗಸೂಚಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಜೀವವೈವಿಧ್ಯ ದಿನ ಆಚರಣೆ
Last Updated 22 ಮೇ 2020, 13:20 IST
ಅಕ್ಷರ ಗಾತ್ರ

ಶಿರಸಿ: ಪ್ರಕೃತಿಯೊಂದಿಗೆ ಸಮತೋಲನ ಸಾಧಿಸುವ ಜೀವನ ಕ್ರಮಕ್ಕೆ ಪ್ರಸ್ತುತ ಹೆಚ್ಚು ಮಹತ್ವ ಬಂದಿದೆ. ಇದನ್ನು ಸಾಧಿಸಲು ಸನಾತನ ಪರಂಪರೆ ಮಾರ್ಗಸೂಚಿಯಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕೃಷಿ ವಿಶ್ವವಿದ್ಯಾಲಯ ಧಾರವಾಡ, ಅರಣ್ಯ ಕಾಲೇಜು, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಜೀವವೈವಿಧ್ಯ ದಿನದ ಅಂಗವಾಗಿ ಶುಕ್ರವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಧ್ಯಾಪಕ ಶ್ರೀಧರ ಭಟ್ಟ ಅವರು ಜನತಾ ಜೀವವೈವಿಧ್ಯ ದಾಖಲಾತಿ ಕುರಿತು ಉಪನ್ಯಾಸ ನೀಡಿದರು. ಅರಣ್ಯ ಕಾಲೇಜಿನ ವಿದ್ಯಾಧಿಕಾರಿ ಡಾ.ಐ.ಎಸ್.ಕಟಗೇರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯೆಯರಾದ ಉಷಾ ಹೆಗಡೆ, ಪ್ರಭಾವತಿ ಗೌಡ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ರವಿ ಹಳದೋಟ, ವಿನಾಯಕ ಭಟ್ಟ, ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್ ಇದ್ದರು.

ಸ್ಪೀಕರ್ ಕಾಗೇರಿ ಅವರು ‘ಜನತಾ ಜೀವವೈವಿಧ್ಯ ದಾಖಲಾತಿ ಮತ್ತು ಅರಣ್ಯ ಕಾಲೇಜಿನ ಸಸ್ಯಸಂಪತ್ತು’ ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು. ಅರಣ್ಯ ಭೂಮಿ, ಕೃಷಿ ಜಮೀನು, ಸಂರಕ್ಷಿತ ಅರಣ್ಯ ಪ್ರದೇಶ, ಅರಣ್ಯ ಸಂಪತ್ತು, ಗಿಡ-ಮರ, ಹುಳು-ಜಂತು, ಪ್ರಾಣಿ-ಪಕ್ಷಿ ಇವುಗಳ ವಿವಿಧ ಪ್ರಬೇಧ ಮತ್ತು ತಳಿಗಳ ಮಾಹಿತಿ, ಔಷಧೀಯ ಗಿಡಮೂಲಿಕೆಗಳ ವಿವರ, ಪಾರಂಪರಿಕ ತಾಣ, ಗುಡಿ-ಗುಂಡಾರಗಳ ಇತಿಹಾಸದ ಜತೆಗೆ ಪ್ರಸಕ್ತ ಅಂಕಿ-ಅಂಶಗಳನ್ನು ಈ ದಾಖಲಾತಿ ಒಳಗೊಂಡಿದೆ.

ಡಾ.ಆರ್.ವಾಸುದೇವ ಸ್ವಾಗತಿಸಿದರು. ಡಾ. ಕೆ.ಮಂಜಪ್ಪ ವಂದಿಸಿದರು. ಡಾ.ವಿನಾಯಕ ಉಪಾಧ್ಯ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT