<p><strong>ಮುಂಡಗೋಡ: </strong>ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಸಚಿವರಾಗಿ ಗುರುವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.</p>.<p>ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ನಾಗಭೂಷಣ ಹಾವಣಗಿ ಮಾತನಾಡಿ, ‘ಯಲ್ಲಾಪುರ ಕ್ಷೇತ್ರದ ಮತದಾರರು ಸಂತಸಪಡುವ ದಿನವಾಗಿದೆ. 12 ವರ್ಷಗಳ ನಂತರ ಕ್ಷೇತ್ರದ ಶಾಸಕರಿಗೆ ಸಚಿವ ಸ್ಥಾನ ದೊರಕಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆಯಲು ಅನುಕೂಲವಾಗಿದೆ’ ಎಂದರು.</p>.<p>ಎಲ್ಎಸ್ಎಂ ಪಿ ಸೊಸೈಟಿ ಅಧ್ಯಕ್ಷ ಉಮೇಶ ಬಿಜಾಪುರ ಮಾತನಾಡಿ, ‘ಶಿವರಾಮ ಹೆಬ್ಬಾರ್ ಸಚಿವರಾಗಿರುವುದಕ್ಕೆ ಬಿಜೆಪಿ ಪಕ್ಷದಲ್ಲಿ ಸಂಭ್ರಮ ಮನೆ ಮಾಡಿದೆ. ನೂತನ ಸಚಿವರ ಅಧಿಕಾರವಧಿಯಲ್ಲಿ ತಾಲ್ಲೂಕು ಇನ್ನಷ್ಟು ಪ್ರಗತಿ ಹೊಂದಲಿದೆ’ ಎಂದರು.</p>.<p>ತಾಲ್ಲೂಕು ಪಂಚಾಯ್ತಿ ಸದಸ್ಯ ಜ್ಞಾನದೇವ ಗುಡಿಯಾಳ, ನಾಗರಾಜ ಕುನ್ನೂರ, ಗುರುರಾಜ ಕಾಮತ್, ವಿನಾಯಕ ರಾಯ್ಕರ್, ವೆಂಕಟೇಶ ತಳವಾರ, ರಾಜು ಗುಬ್ಬಕ್ಕನವರ್, ಸುನೀಲ ವೆರ್ಣೇಕರ್, ಶಿವಜ್ಯೋತಿ ಹುದ್ಲಮನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ: </strong>ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಸಚಿವರಾಗಿ ಗುರುವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.</p>.<p>ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ನಾಗಭೂಷಣ ಹಾವಣಗಿ ಮಾತನಾಡಿ, ‘ಯಲ್ಲಾಪುರ ಕ್ಷೇತ್ರದ ಮತದಾರರು ಸಂತಸಪಡುವ ದಿನವಾಗಿದೆ. 12 ವರ್ಷಗಳ ನಂತರ ಕ್ಷೇತ್ರದ ಶಾಸಕರಿಗೆ ಸಚಿವ ಸ್ಥಾನ ದೊರಕಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆಯಲು ಅನುಕೂಲವಾಗಿದೆ’ ಎಂದರು.</p>.<p>ಎಲ್ಎಸ್ಎಂ ಪಿ ಸೊಸೈಟಿ ಅಧ್ಯಕ್ಷ ಉಮೇಶ ಬಿಜಾಪುರ ಮಾತನಾಡಿ, ‘ಶಿವರಾಮ ಹೆಬ್ಬಾರ್ ಸಚಿವರಾಗಿರುವುದಕ್ಕೆ ಬಿಜೆಪಿ ಪಕ್ಷದಲ್ಲಿ ಸಂಭ್ರಮ ಮನೆ ಮಾಡಿದೆ. ನೂತನ ಸಚಿವರ ಅಧಿಕಾರವಧಿಯಲ್ಲಿ ತಾಲ್ಲೂಕು ಇನ್ನಷ್ಟು ಪ್ರಗತಿ ಹೊಂದಲಿದೆ’ ಎಂದರು.</p>.<p>ತಾಲ್ಲೂಕು ಪಂಚಾಯ್ತಿ ಸದಸ್ಯ ಜ್ಞಾನದೇವ ಗುಡಿಯಾಳ, ನಾಗರಾಜ ಕುನ್ನೂರ, ಗುರುರಾಜ ಕಾಮತ್, ವಿನಾಯಕ ರಾಯ್ಕರ್, ವೆಂಕಟೇಶ ತಳವಾರ, ರಾಜು ಗುಬ್ಬಕ್ಕನವರ್, ಸುನೀಲ ವೆರ್ಣೇಕರ್, ಶಿವಜ್ಯೋತಿ ಹುದ್ಲಮನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>