<p><strong>ಶಿರಸಿ:</strong> ಕೋವಿಡ್ 19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ಡೌನ್ ವಿಫಲವಾಗುತ್ತದೆ ಎಂದು ನಂಬಿದ್ದ ಕಾಂಗ್ರೆಸ್ ಪಕ್ಷದವರ ನಂಬಿಕೆಯೇ ವಿಫಲವಾಗಿದೆ. ಹೀಗಾಗಿ, ವಿನಾಕಾರಣ ಬಿಜೆಪಿಯವರ ಮೇಲೆ ಆರೋಪ ಮಾಡುತ್ತಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.</p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ‘ಬಿಜೆಪಿ ಹೆಣದ ಮೇಲೆ ಕುಳಿತು ಹಣ ಮಾಡುವ ಪಕ್ಷ’ ಎಂಬ ಹೇಳಿಕೆಯನ್ನು ಖಂಡಿಸಿದರು. ಸರ್ಕಾರ ಜಾರಿಗೊಳಿಸಿದ್ದ ಲಾಕ್ಡೌನ್ ಸಫಲವಾಗಿದೆ. ಇದು ಕಾಂಗ್ರೆಸ್ಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ, ಬಿಜೆಪಿ ವಿರುದ್ಧ ಹುಳುಕು ಹುಡುಕಲು ಪ್ರಾರಂಭಿಸಿದ್ದಾರೆ. ಗಲಾಟೆ, ಅಕ್ರಮಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದವರು ಇಂತಹ ಹೇಳಿಕೆ ನೀಡುವುದು ಹಾಸ್ಯಾಸ್ಪದ’ ಎಂದರು.</p>.<p>ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದವರಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂಧ 19,700 ಆಹಾರ ಕಿಟ್ ವಿತರಿಸಲಾಗಿದೆ. 1.17 ಲಕ್ಷ ರೇಷನ್ ಕಿಟ್, 12,800 ಮುಖಗವಸು, ಸ್ಯಾನಿಟೈಸರ್ ನೀಡಲಾಗಿದೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಾಕಷ್ಟು ಕೆಲಸ ಮಾಡಿದ್ದಾರೆ ಎಂದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಪ್ರಮುಖರಾದ ಆರ್.ಡಿ.ಹೆಗಡೆ, ಎಂ.ಎಸ್.ಹೆಗಡೆ,ಚಂದ್ರು ದೇವಾಡಿಗ, ರಾಜೇಶ ಶೆಟ್ಟಿ, ಶ್ರೀರಾಮ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಕೋವಿಡ್ 19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ಡೌನ್ ವಿಫಲವಾಗುತ್ತದೆ ಎಂದು ನಂಬಿದ್ದ ಕಾಂಗ್ರೆಸ್ ಪಕ್ಷದವರ ನಂಬಿಕೆಯೇ ವಿಫಲವಾಗಿದೆ. ಹೀಗಾಗಿ, ವಿನಾಕಾರಣ ಬಿಜೆಪಿಯವರ ಮೇಲೆ ಆರೋಪ ಮಾಡುತ್ತಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.</p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ‘ಬಿಜೆಪಿ ಹೆಣದ ಮೇಲೆ ಕುಳಿತು ಹಣ ಮಾಡುವ ಪಕ್ಷ’ ಎಂಬ ಹೇಳಿಕೆಯನ್ನು ಖಂಡಿಸಿದರು. ಸರ್ಕಾರ ಜಾರಿಗೊಳಿಸಿದ್ದ ಲಾಕ್ಡೌನ್ ಸಫಲವಾಗಿದೆ. ಇದು ಕಾಂಗ್ರೆಸ್ಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ, ಬಿಜೆಪಿ ವಿರುದ್ಧ ಹುಳುಕು ಹುಡುಕಲು ಪ್ರಾರಂಭಿಸಿದ್ದಾರೆ. ಗಲಾಟೆ, ಅಕ್ರಮಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದವರು ಇಂತಹ ಹೇಳಿಕೆ ನೀಡುವುದು ಹಾಸ್ಯಾಸ್ಪದ’ ಎಂದರು.</p>.<p>ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದವರಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂಧ 19,700 ಆಹಾರ ಕಿಟ್ ವಿತರಿಸಲಾಗಿದೆ. 1.17 ಲಕ್ಷ ರೇಷನ್ ಕಿಟ್, 12,800 ಮುಖಗವಸು, ಸ್ಯಾನಿಟೈಸರ್ ನೀಡಲಾಗಿದೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಾಕಷ್ಟು ಕೆಲಸ ಮಾಡಿದ್ದಾರೆ ಎಂದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಪ್ರಮುಖರಾದ ಆರ್.ಡಿ.ಹೆಗಡೆ, ಎಂ.ಎಸ್.ಹೆಗಡೆ,ಚಂದ್ರು ದೇವಾಡಿಗ, ರಾಜೇಶ ಶೆಟ್ಟಿ, ಶ್ರೀರಾಮ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>