ಕಾಂಗ್ರೆಸ್ ಪ್ರಣಾಳಿಕೆ ಕುರಿತು ಟೀಕಿಸಿದ ಅವರು, ಬಡವರಿಗೆ ವಾರ್ಷಿಕ ₹ 72ಸಾವಿರ ನೆರವಾಗುವ ಯೋಜನೆ ಅಸಾಧ್ಯವಾದದ್ದಾಗಿದೆ. ಎಲ್ಲ ಯೋಜನೆಗಳನ್ನು ಸ್ಥಗಿತಗೊಳಿಸಿ, ಈ ಯೋಜನೆಗೆ ಹಣ ನೀಡಿದರೂ, ಇದು ಯಶಸ್ವಿಯಾಗದು. ಭಯೋತ್ಪಾದನೆ ನಿಯಂತ್ರಣಕ್ಕೆ ಸಂಬಂಧಿಸಿದ ವಿಶೇಷ ಕಾಯ್ದೆ ರದ್ದು ಮಾಡುವ ಪ್ರಸ್ತಾಪ ರಾಷ್ಟ್ರದ ಭವಿಷ್ಯದ ದೃಷ್ಟಿಯಿಂದ ಮಾರಕ ಎಂದು ಹೇಳಿದರು. ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ನಾಯ್ಕ, ನಗರ ಘಟಕದ ಅಧ್ಯಕ್ಷ ಗಣಪತಿ ನಾಯ್ಕ, ಗ್ರಾಮೀಣ ಘಟಕದ ಅಧ್ಯಕ್ಷ ಆರ್.ವಿ.ಹೆಗಡೆ, ಪ್ರಮುಖರಾದ ರಮಾಕಾಂತ ಭಟ್ಟ, ನಂದನ ಸಾಗರ, ವಿನಾಯಕ ಹೆಗಡೆ ಇದ್ದರು.