ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ನಾಯ್ಕ ಮಾತನಾಡಿ, ಜುಲೈ 6ರಿಂದ ಅಗಸ್ಟ್ 11ರವರೆಗೆ ಸದಸ್ಯತ್ವ ಅಭಿಯಾನ ಮಾಡಲಾಗುವುದು. ಕಳೆದ ಬಾರಿ 1.40 ಲಕ್ಷ ಸದಸ್ಯತ್ವ ಮಾಡಲಾಗಿತ್ತು. ಈ ಬಾರಿ ಶೇ 20 ಹೆಚ್ಚಿಸುವ ಗುರಿಯಿದೆ. ಜಿಲ್ಲೆಯಲ್ಲಿ 1437 ಬೂತ್ಗಳಿದ್ದು, ಪ್ರತಿ ಬೂತ್ನಲ್ಲಿ 200ರಷ್ಟು ಸದಸ್ಯರನ್ನು ಮಾಡಬೇಕಾಗಿದೆ’ ಎಂದರು. ಜಿಲ್ಲಾ ಪ್ರಭಾರಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಹಿರಿಯರಾದ ಗಣೇಶ ರಾಯ್, ಮಾಜಿ ಶಾಸಕರಾದ ಸುನೀಲ್ ಹೆಗಡೆ, ವಿ.ಎಸ್.ಪಾಟೀಲ, ಪ್ರಮುಖರಾದ ವೆಂಕಟೇಶ ನಾಯ್ಕ, ಎನ್.ಎಸ್.ಹೆಗಡೆ ಇದ್ದರು. ಆರ್.ಡಿ.ಹೆಗಡೆ ಸ್ವಾಗತಿಸಿದರು.