ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ, ಈಗಾಗಲೇ ಸಿದ್ಧವಾಗಿರುವ ದಾಂಡೇಲಿ- ಅಳ್ನಾವರ ಮಾರ್ಗದಲ್ಲಿ ಪ್ರಯಾಣಿಕರ ರೈಲು ಸಂಚಾರ ಪ್ರಾರಂಭಿಸುವುದು, ಡಿಜಿಟಲ್ ಹಾಗೂ ಇಂಟರ್ನೆಟ್ ತಂತ್ರಜ್ಞಾನ ಬಳಕೆಗೆ ಪ್ರೋತ್ಸಾಹ, ಸಾಮಾನ್ಯ ಸೇವಾ ಕೇಂದ್ರಗಳ ಸ್ಥಾಪನೆ, ಸೀಬರ್ಡ್ ನೌಕಾನೆಲೆಯ ವಿಮಾನ ನಿಲ್ದಾಣದ ಸೇವೆಯನ್ನು ಸಾರ್ವಜನಿಕರಿಗೆ ವಿಸ್ತರಿಸುವುದು, ಶರಾವತಿ, ಕಾಳಿ ನದಿಗಳ ಮೂಲಕ ಜಲ ಸಂಪರ್ಕ ವ್ಯವಸ್ಥೆ ನಿರ್ಮಾಣ, ಕ್ಷೇತ್ರದ ನಗರಗಳಿಗೆ ವರ್ತುಲ ರಸ್ತೆ ನಿರ್ಮಾಣ, ಬಡವರ ಸೂರು ಯೋಜನೆಗೆ ಪ್ರೋತ್ಸಾಹ, ಸುಸ್ಥಿರ ಮೀನುಗಾರಿಕಾ ಅಭಿವೃದ್ಧಿ, ಕೌಶಲ ವಿಕಾಸ ಯೋಜನೆಗಳಿಗೆ ಪ್ರಾಶಸ್ತ್ಯ ಹೀಗೆ ಸರ್ವಾಂಗೀಣ ಪ್ರಗತಿಯನ್ನೊಳಗೊಂಡು ಪ್ರಣಾಳಿಕೆ ತಯಾರಿಸಲಾಗಿದೆ ಎಂದು ತಿಳಿಸಿದರು. ಪ್ರಮುಖರಾದ ವಿ.ಎಸ್.ಪಾಟೀಲ, ಸುನೀಲ್ ಹೆಗಡೆ, ಗೋವಿಂದ ನಾಯ್ಕ, ರೇಖಾ ಹೆಗಡೆ, ಆರ್.ಡಿ.ಹೆಗಡೆ, ಗಣೇಶ ಸಣ್ಣಲಿಂಗಣ್ಣನವರ್ ಇದ್ದರು.