ಸಾಗರ ರಸ್ತೆಯಲ್ಲಿರುವ ಹಜ್ರತ್ ಸಯ್ಯದ್ ಶಾಲಿಮ್ಮಾ ದಿವಾನ್ ದರ್ಗಾದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರು ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ, ಕೋವಿಡ್ 19 ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಯಡಿಯೂರಪ್ಪ ಆದಷ್ಟು ಶೀಘ್ರ ಗುಣಮುಖರಾಗಿ, ನಾಡಿನ ಸೇವೆಗೆ ಬರಲಿ ಎಂದು ಪ್ರಾರ್ಥಿಸಿದರು. ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅನೀಸ್ ತಹಸೀಲ್ದಾರ್ ಇದ್ದರು.