<p><strong>ಶಿರಸಿ: </strong>ಇಲ್ಲಿನ ಬಿಜೆಪಿ ಜಿಲ್ಲಾ ಘಟಕದ ಕಾರ್ಯಾಲಯದಲ್ಲಿ ಸೋಮವಾರ ಮನೆ-ಮನೆ ಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆಗೊಳಿಸಲಾಯಿತು.</p>.<p>ಈ ಸಂದರ್ಭ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಅವರು, ‘ನರೇಂದ್ರ ಮೋದಿ ಸರ್ಕಾರದ ಎರಡನೆಯ ಅವಧಿಯ ಮೊದಲ ವರ್ಷದ ಸಾಧನೆಗಳನ್ನು ತಿಳಿಸುವ ಕರಪತ್ರ ಹಾಗೂ ಮೋದಿಯವರು ಜನತೆಗೆ ಬರೆದಿರುವ ಪತ್ರ ಈ ಎರಡೂ ಪ್ರತಿಗಳನ್ನು ಕಾರ್ಯಕರ್ತರು ಮನೆ-ಮನೆಗೆ ತಲುಪಿಸಲಿದ್ದಾರೆ’ ಎಂದರು.</p>.<p>ಕೋವಿಡ್-19 ಹಿನ್ನೆಲೆಯಲ್ಲಿ ಮನೆ-ಮನೆಗಳಿಗೆ ತೆರಳುವಾಗ ಪರಸ್ಪರ ಅಂತರ ಪಾಲನೆಯಾಗಬೇಕು. ಕಾರ್ಯಕರ್ತರು ಕಡಿಮೆ ಸಂಖ್ಯೆಯಲ್ಲಿ ತೆರಳಿ ಎಲ್ಲ ಮನೆಗಳನ್ನು ಸಂಪರ್ಕ ಮಾಡಬೇಕು ಎಂದು ಸೂಚನೆ ನೀಡಿದರು.</p>.<p>ಆತ್ಮನಿರ್ಭರ ಭಾರತ ಅಭಿಯಾನದ ಕುರಿತಾಗಿ ಮಾತನಾಡಿದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಅವರು, ‘ಪರೋಕ್ಷ ಸಮಾವೇಶಗಳ ಮೂಲಕ ಜನರನ್ನು ತಲುಪಬೇಕು. ರಾಜ್ಯ ಹಾಗೂ ವಿಭಾಗ ಮಟ್ಟದಲ್ಲಿ ನಡೆಯುವ ಫಲಾನುಭವಿಗಳ ಪರೋಕ್ಷ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>ಪಕ್ಷದ ಪ್ರಮುಖರಾದ ರೇಖಾ ಅಂಡಗಿ, ಗುರುಪ್ರಸಾದ ಹೆಗಡೆ, ಶ್ರೀಕಾಂತ ನಾಯ್ಕ, ರಾಜೇಶ ಶೆಟ್ಟಿ, ಗಣಪತಿ ನಾಯ್ಕ ಇದ್ದರು. ನಂತರ ನಾಡಿಗಗಲ್ಲಿಯ ಮನೆ, ಅಂಗಡಿಗಳಿಗೆ ತೆರಳಿ ಕರಪತ್ರ ವಿತರಿಸಿ, ಅಭಿಯಾನಕ್ಕೆ ಚಾಲನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಇಲ್ಲಿನ ಬಿಜೆಪಿ ಜಿಲ್ಲಾ ಘಟಕದ ಕಾರ್ಯಾಲಯದಲ್ಲಿ ಸೋಮವಾರ ಮನೆ-ಮನೆ ಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆಗೊಳಿಸಲಾಯಿತು.</p>.<p>ಈ ಸಂದರ್ಭ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಅವರು, ‘ನರೇಂದ್ರ ಮೋದಿ ಸರ್ಕಾರದ ಎರಡನೆಯ ಅವಧಿಯ ಮೊದಲ ವರ್ಷದ ಸಾಧನೆಗಳನ್ನು ತಿಳಿಸುವ ಕರಪತ್ರ ಹಾಗೂ ಮೋದಿಯವರು ಜನತೆಗೆ ಬರೆದಿರುವ ಪತ್ರ ಈ ಎರಡೂ ಪ್ರತಿಗಳನ್ನು ಕಾರ್ಯಕರ್ತರು ಮನೆ-ಮನೆಗೆ ತಲುಪಿಸಲಿದ್ದಾರೆ’ ಎಂದರು.</p>.<p>ಕೋವಿಡ್-19 ಹಿನ್ನೆಲೆಯಲ್ಲಿ ಮನೆ-ಮನೆಗಳಿಗೆ ತೆರಳುವಾಗ ಪರಸ್ಪರ ಅಂತರ ಪಾಲನೆಯಾಗಬೇಕು. ಕಾರ್ಯಕರ್ತರು ಕಡಿಮೆ ಸಂಖ್ಯೆಯಲ್ಲಿ ತೆರಳಿ ಎಲ್ಲ ಮನೆಗಳನ್ನು ಸಂಪರ್ಕ ಮಾಡಬೇಕು ಎಂದು ಸೂಚನೆ ನೀಡಿದರು.</p>.<p>ಆತ್ಮನಿರ್ಭರ ಭಾರತ ಅಭಿಯಾನದ ಕುರಿತಾಗಿ ಮಾತನಾಡಿದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಅವರು, ‘ಪರೋಕ್ಷ ಸಮಾವೇಶಗಳ ಮೂಲಕ ಜನರನ್ನು ತಲುಪಬೇಕು. ರಾಜ್ಯ ಹಾಗೂ ವಿಭಾಗ ಮಟ್ಟದಲ್ಲಿ ನಡೆಯುವ ಫಲಾನುಭವಿಗಳ ಪರೋಕ್ಷ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>ಪಕ್ಷದ ಪ್ರಮುಖರಾದ ರೇಖಾ ಅಂಡಗಿ, ಗುರುಪ್ರಸಾದ ಹೆಗಡೆ, ಶ್ರೀಕಾಂತ ನಾಯ್ಕ, ರಾಜೇಶ ಶೆಟ್ಟಿ, ಗಣಪತಿ ನಾಯ್ಕ ಇದ್ದರು. ನಂತರ ನಾಡಿಗಗಲ್ಲಿಯ ಮನೆ, ಅಂಗಡಿಗಳಿಗೆ ತೆರಳಿ ಕರಪತ್ರ ವಿತರಿಸಿ, ಅಭಿಯಾನಕ್ಕೆ ಚಾಲನೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>