ಪಟ್ಟಣದಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್ ಪಕ್ಷವು ರಸ್ತೆ, ನೀರು, ಸೇತುವೆ ಬಗ್ಗೆ ಮಾತನಾಡಿದರೆ, ಬಿ.ಜೆ.ಪಿ.ಯವರು ಹಿಂದೂ ಮುಸ್ಲಿಂ, ಚೀನಾ, ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಇಂತಹ ಜನವಿರೋಧಿ, ಜನರ ಶಾಂತಿ ನೆಮ್ಮದಿ ಕೆಡಿಸುವ ಪಕ್ಷ ನಮಗೆ ಬೇಕೇ’ ಎಂದು ಪ್ರಶ್ನಿಸಿದರು.