<p><strong>ಶಿರಸಿ:</strong> ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಶುಕ್ರವಾರ ಕಪ್ಪು ಚಿರತೆಯೊಂದುಸಿಲುಕಿ ಮೃತಪಟ್ಟಿದೆ.</p>.<p>ಇದು4 ವರ್ಷದ ಹೆಣ್ಣು ಕಪ್ಪು ಚಿರತೆಯಾಗಿದ್ದು, ಉರುಳು ತಂತಿಯಿಂದಸೊಂಟದ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಮೃತಪಟ್ಟಿದೆ.ಬನವಾಸಿ ಅರಣ್ಯ ವ್ಯಾಪ್ತಿಯಲ್ಲಿ ಪತ್ತೆಯಾದ ಮೊದಲ ಕಪ್ಪು ಚಿರತೆ ಇದಾಗಿದೆ.</p>.<p>ನಸುಕಿನ ಜಾವ ಕಪ್ಪು ಚಿರತೆಯು ಬೇಲಿಗೆ ಸಿಲುಕಿ ಒದ್ದಾಡುವುದನ್ನು ಕಂಡಗ್ರಾಮಸ್ಥರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದರು.</p>.<p>'ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಪ್ರಯತ್ನ ನಡೆಯಿತು. ಜನ ಜಂಗುಳಿಯೂ ಹೆಚ್ಚಿತ್ತು. ಹೀಗಾಗಿ ಚಿರತೆ ಭಯದಿಂದಲೂ ಮೃತಪಟ್ಟಿರಬಹುದು' ಎಂದು ಆರ್.ಎಫ್.ಓ. ಉಷಾ ಕಬ್ಬೇರ ತಿಳಿಸಿದರು.</p>.<p>'ಪ್ರಾಣಿ ಹಿಡಿಯಲು ಉರುಳು ಹಾಕಿದವರ ಪತ್ತೆಗೆ ಮುಂದಾಗಿದ್ದೇವೆ' ಎಂದು ತಿಳಿಸಿದರು.</p>.<p>ಪಶು ವೈದ್ಯಾಧಿಕಾರಿ ಡಾ.ದಿನೇಶ ಕೆ.ಎನ್. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.</p>.<p><a href="https://www.prajavani.net/district/mysore/hunsur-farmer-who-grew-a-taiwan-pink-guava-861039.html" itemprop="url">ಹುಣಸೂರು: ಗಜಗಾತ್ರದ ‘ತೈವಾನ್ ಸೀಬೆ’ ಬೆಳೆದ ಬೀಜಗನಹಳ್ಳಿಯ ರೈತ ನಾಗರಾಜ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಶುಕ್ರವಾರ ಕಪ್ಪು ಚಿರತೆಯೊಂದುಸಿಲುಕಿ ಮೃತಪಟ್ಟಿದೆ.</p>.<p>ಇದು4 ವರ್ಷದ ಹೆಣ್ಣು ಕಪ್ಪು ಚಿರತೆಯಾಗಿದ್ದು, ಉರುಳು ತಂತಿಯಿಂದಸೊಂಟದ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಮೃತಪಟ್ಟಿದೆ.ಬನವಾಸಿ ಅರಣ್ಯ ವ್ಯಾಪ್ತಿಯಲ್ಲಿ ಪತ್ತೆಯಾದ ಮೊದಲ ಕಪ್ಪು ಚಿರತೆ ಇದಾಗಿದೆ.</p>.<p>ನಸುಕಿನ ಜಾವ ಕಪ್ಪು ಚಿರತೆಯು ಬೇಲಿಗೆ ಸಿಲುಕಿ ಒದ್ದಾಡುವುದನ್ನು ಕಂಡಗ್ರಾಮಸ್ಥರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದರು.</p>.<p>'ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಪ್ರಯತ್ನ ನಡೆಯಿತು. ಜನ ಜಂಗುಳಿಯೂ ಹೆಚ್ಚಿತ್ತು. ಹೀಗಾಗಿ ಚಿರತೆ ಭಯದಿಂದಲೂ ಮೃತಪಟ್ಟಿರಬಹುದು' ಎಂದು ಆರ್.ಎಫ್.ಓ. ಉಷಾ ಕಬ್ಬೇರ ತಿಳಿಸಿದರು.</p>.<p>'ಪ್ರಾಣಿ ಹಿಡಿಯಲು ಉರುಳು ಹಾಕಿದವರ ಪತ್ತೆಗೆ ಮುಂದಾಗಿದ್ದೇವೆ' ಎಂದು ತಿಳಿಸಿದರು.</p>.<p>ಪಶು ವೈದ್ಯಾಧಿಕಾರಿ ಡಾ.ದಿನೇಶ ಕೆ.ಎನ್. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.</p>.<p><a href="https://www.prajavani.net/district/mysore/hunsur-farmer-who-grew-a-taiwan-pink-guava-861039.html" itemprop="url">ಹುಣಸೂರು: ಗಜಗಾತ್ರದ ‘ತೈವಾನ್ ಸೀಬೆ’ ಬೆಳೆದ ಬೀಜಗನಹಳ್ಳಿಯ ರೈತ ನಾಗರಾಜ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>