ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೆಲ್ಫಿ’ ತೆಗೆದುಕೊಳ್ಳುವಾಗ ‘ಕಾಳಿ’ಗೆ ಬಿದ್ದ ಯುವಕ, ಯುವತಿ

Last Updated 12 ಏಪ್ರಿಲ್ 2021, 13:59 IST
ಅಕ್ಷರ ಗಾತ್ರ

ಜೊಯಿಡಾ: ತಾಲ್ಲೂಕಿನ ಗಣೇಶಗುಡಿಯಲ್ಲಿ ಸೋಮವಾರ, ಮೊಬೈಲ್‌ ಫೋನ್‌ನಲ್ಲಿ ‘ಸೆಲ್ಫಿ’ ತೆಗೆದುಕೊಳ್ಳುವಾಗ ಆಯತಪ್ಪಿ ಕಾಳಿ ನದಿಗೆ ಬಿದ್ದ ಯುವಕ ಮತ್ತು ಯುವತಿ ನಾಪತ್ತೆಯಾಗಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ಸೂಪಾ‌ ಜಲಾಶಯದ ಬಳಿ ಇರುವ ಕಾಳಿ ನದಿ ಸೇತುವೆಯ ಕೆಳಭಾಗದ ಕಟ್ಟೆಯ ಮೇಲೆ ನಿಂತು ‘ಸೆಲ್ಫಿ’ ತೆಗೆದುಕೊಳ್ಳುತ್ತಿದ್ದರು. ಆಗ ಇಬ್ಬರೂ ಕಾಲುಜಾರಿ ನದಿಗೆ ಬಿದ್ದು ತೇಲಿಕೊಂಡು ಹೋದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಯುವತಿಯನ್ನು ಬೀದರ್‌ನ ರಕ್ಷಿತಾ ಎಂದು ಗುರುತಿಸಲಾಗಿದೆ. ಯುವಕನ ಮಾಹಿತಿ ತಿಳಿದುಬರಬೇಕಿದೆ. ರಾಮನಗರ ಠಾಣೆ ಪಿ.ಎಸ್.ಐ ಕಿರಣ ಪಾಟೀಲ ಹಾಗೂ ಜೊಯಿಡಾದ ಅಗ್ನಿಶಾಮಕ ಸಿಬ್ಬಂದಿ, ವೈಟ್ ವಾಟರ್ ರ‍್ಯಾಫ್ಟಿಂಗ್ ತಂಡದ ಸದಸ್ಯರು ಸ್ಥಳದಲ್ಲಿದ್ದು, ಇಬ್ಬರಿಗೂ ಶೋಧ ಕಾರ್ಯ ನಡೆಸುತ್ತಿದ್ದಾರೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT