<p><strong>ಜೊಯಿಡಾ:</strong> ತಾಲ್ಲೂಕಿನ ಗಣೇಶಗುಡಿಯಲ್ಲಿ ಸೇತುವೆಯ ಮೇಲೆ ಸೋಮವಾರ ಮೊಬೈಲ್ ಫೋನ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕಾಳಿ ನದಿಗೆ ಬಿದ್ದ ಪ್ರೇಮಿಗಳ ಮೃತದೇಹಗಳು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.</p>.<p>ಸೋಮವಾರ ಸಂಜೆಯಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಯುವಕ ಯುವತಿಯ ಹುಡುಕಾಟ ಮದಲ್ಲಿ ನಿರತರಾಗಿದ್ದರು. ಮಂಗಳವಾರ ಗಣೇಶಗುಡಿಯ ಫ್ಲೈ ಕ್ಯಾಚರ್ ರೆಸಾರ್ಟ್ ಸಿಬ್ಬಂದಿ ಸಹಕಾರದಿಂದ ಇಬ್ಬರ ಮೃತದೇಹಗಳನ್ನು ನೀರಿನಿಂದ ಮೇಲಕ್ಕೆ ತರಲಾಯಿತು.</p>.<p>ಯುವತಿಯನ್ನು ಬೀದರ್ನ ರಕ್ಷಿತಾ ಎಂದು ಗುರುತಿಸಲಾಗಿದೆ. ಅವರು ಕಲಬುರ್ಗಿಯಲ್ಲಿಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು. ಯುವಕ ಕೂಡ ಬೀದರ್ನವರಾಗಿದ್ದು, ಪರುಷೋತ್ತಮ ಪಾಟೀಲ ಎಂದು ಗುರುತಿಸಲಾಗಿದೆ. ಅವರು ಬೀದರ್ನ ಕರ್ನಾಟಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/uthara-kannada/boy-and-girl-falls-into-river-kali-while-clicking-selfie-near-joida-821840.html" itemprop="url">‘ಸೆಲ್ಫಿ’ ತೆಗೆದುಕೊಳ್ಳುವಾಗ ‘ಕಾಳಿ’ಗೆ ಬಿದ್ದ ಯುವಕ, ಯುವತಿ </a></p>.<p>ಸ್ಥಳಕ್ಕೆ ಯುವತಿಯ ಕುಟುಂಬದವರು ಬಂದಿದ್ದು ಅವರ ಆಕ್ರಂದನ ಮುಗಿಲು ಮುಟ್ಟಿದೆ.ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರವೇ ಇದು ಸಹಜ ಸಾವೇ ಅಥವಾ ಆತ್ಮಹತ್ಯೆಯೇ ಎಂದು ತಿಳಿದು ಬರಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ:</strong> ತಾಲ್ಲೂಕಿನ ಗಣೇಶಗುಡಿಯಲ್ಲಿ ಸೇತುವೆಯ ಮೇಲೆ ಸೋಮವಾರ ಮೊಬೈಲ್ ಫೋನ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕಾಳಿ ನದಿಗೆ ಬಿದ್ದ ಪ್ರೇಮಿಗಳ ಮೃತದೇಹಗಳು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.</p>.<p>ಸೋಮವಾರ ಸಂಜೆಯಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಯುವಕ ಯುವತಿಯ ಹುಡುಕಾಟ ಮದಲ್ಲಿ ನಿರತರಾಗಿದ್ದರು. ಮಂಗಳವಾರ ಗಣೇಶಗುಡಿಯ ಫ್ಲೈ ಕ್ಯಾಚರ್ ರೆಸಾರ್ಟ್ ಸಿಬ್ಬಂದಿ ಸಹಕಾರದಿಂದ ಇಬ್ಬರ ಮೃತದೇಹಗಳನ್ನು ನೀರಿನಿಂದ ಮೇಲಕ್ಕೆ ತರಲಾಯಿತು.</p>.<p>ಯುವತಿಯನ್ನು ಬೀದರ್ನ ರಕ್ಷಿತಾ ಎಂದು ಗುರುತಿಸಲಾಗಿದೆ. ಅವರು ಕಲಬುರ್ಗಿಯಲ್ಲಿಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು. ಯುವಕ ಕೂಡ ಬೀದರ್ನವರಾಗಿದ್ದು, ಪರುಷೋತ್ತಮ ಪಾಟೀಲ ಎಂದು ಗುರುತಿಸಲಾಗಿದೆ. ಅವರು ಬೀದರ್ನ ಕರ್ನಾಟಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/uthara-kannada/boy-and-girl-falls-into-river-kali-while-clicking-selfie-near-joida-821840.html" itemprop="url">‘ಸೆಲ್ಫಿ’ ತೆಗೆದುಕೊಳ್ಳುವಾಗ ‘ಕಾಳಿ’ಗೆ ಬಿದ್ದ ಯುವಕ, ಯುವತಿ </a></p>.<p>ಸ್ಥಳಕ್ಕೆ ಯುವತಿಯ ಕುಟುಂಬದವರು ಬಂದಿದ್ದು ಅವರ ಆಕ್ರಂದನ ಮುಗಿಲು ಮುಟ್ಟಿದೆ.ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರವೇ ಇದು ಸಹಜ ಸಾವೇ ಅಥವಾ ಆತ್ಮಹತ್ಯೆಯೇ ಎಂದು ತಿಳಿದು ಬರಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>