<p><strong>ಕಾರವಾರ:</strong> ‘ವಿಧಾನಸಭೆ ಚುನಾವಣೆಯಲ್ಲಿ 50 ಮಂದಿ ಸಾಧು ಸಂತರು ಸ್ಪರ್ಧಿಸಲಿದ್ದಾರೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಕ್ಕೆ ವಿಶೇಷ ಅರ್ಥವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಅವರ ಭಕ್ತರು. ನಾನು ಅವರೊಂದಿಗೆ ಮಾತನಾಡಿದ್ದೇನೆ. ಅವರ ಭಾವನೆಗಳಿಗೆ ಗೌರವ ಕೊಡುತ್ತೇವೆ, ಅದು ಆಶೀರ್ವಾದವಾಗಿ ನಮ್ಮ ಮೇಲೆ ಪರಿವರ್ತನೆ ಆಗಬೇಕು ಎಂದು ಕೇಳಿದ್ದೇನೆ. ಅದಕ್ಕೆ ಅವರು ಶುಭವಾಗಲಿ ಎಂದಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಬಿ.ಜೆ.ಪಿ.ಯು ರಾಜಧರ್ಮದ ರಾಜಕಾರಣ ಮಾಡುತ್ತದೆ. ಹಿಂದುತ್ವದ ಪ್ರತಿಪಾದನೆ, ಸಾಮಾಜಿಕ ನ್ಯಾಯದ ಒಟ್ಟು ಕಲ್ಪನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಸಾಧು ಸಂತರೆಲ್ಲರೂ ಬಿ.ಜೆ.ಪಿ.ಯನ್ನು ಬೆಂಬಲಿಸಬೇಕಾದ ಅನಿವಾರ್ಯತೆ ಇದೆ ಎಂಬ ಭಾವನೆ ಹೊಂದಿದ್ದಾರೆ. ಆ ಹಿನ್ನೆಲೆಯಲ್ಲಿ ನಾವು ಮತ್ತಷ್ಟು ಪ್ರಖರವಾಗಿ ಕೆಲಸ ಮಾಡಬೇಕು ಎಂಬರ್ಥದಲ್ಲಿ ಸ್ವಾಮೀಜಿ ತಾವು ಸ್ಪರ್ಧೆ ಮಾಡಬೇಕು ಎಂದು ಹೇಳಿದ್ದಾರೆ’ ಎಂದು ಪ್ರತಿಪಾದಿಸಿದರು.</p>.<p>ಭಟ್ಕಳದ ಸಾರದ ಹೊಳೆ ಹಳೆಕೋಟೆ ಶ್ರೀಕ್ಷೇತ್ರ ಹನುಮಂತ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸ್ವಾಮೀಜಿ, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.</p>.<p class="Subhead"><strong>ಸರ್ಕಾರದ ಅಂಗಸಂಸ್ಥೆಗಳು:</strong>‘ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮತ್ತು ನಿರ್ಮಿತಿ ಕೇಂದ್ರಗಳು ಸರ್ಕಾರದ ಅಂಗಸಂಸ್ಥೆಗಳಾಗಿವೆ. ಸರ್ಕಾರದ ಕೆಲಸಗಳು ಯಾವ ಗುಣಮಟ್ಟ ಹೊಂದಿರಬೇಕು ಎಂದು ನಿಯಮವಿದೆಯೋ ಅದರಲ್ಲಿ ಯಾವುದೇ ರಾಜಿಯನ್ನು ಮಾಡಿಕೊಂಡಿಲ್ಲ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಇನ್ನುಮುಂದೆ ಎಲ್ಲ ಕೆಲಸಗಳನ್ನು ಸಂಸ್ಥೆಗಳಿಗೆ ವಹಿಸುತ್ತಾರೆ ಎಂಬ ಭಾವನೆ ಕೆಲವರಿಗೆ ಬಂದ ಹಾಗಿದೆ. ಟೆಂಡರ್ ಕರೆಯುವಂತೆ ಒತ್ತಾಯಿಸುತ್ತಿದ್ದಾರೆ. ಗುತ್ತಿಗೆದಾರರ ಭಾವನೆಗಳನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧರಿಸಲಿದೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ವಿಧಾನಸಭೆ ಚುನಾವಣೆಯಲ್ಲಿ 50 ಮಂದಿ ಸಾಧು ಸಂತರು ಸ್ಪರ್ಧಿಸಲಿದ್ದಾರೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಕ್ಕೆ ವಿಶೇಷ ಅರ್ಥವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಅವರ ಭಕ್ತರು. ನಾನು ಅವರೊಂದಿಗೆ ಮಾತನಾಡಿದ್ದೇನೆ. ಅವರ ಭಾವನೆಗಳಿಗೆ ಗೌರವ ಕೊಡುತ್ತೇವೆ, ಅದು ಆಶೀರ್ವಾದವಾಗಿ ನಮ್ಮ ಮೇಲೆ ಪರಿವರ್ತನೆ ಆಗಬೇಕು ಎಂದು ಕೇಳಿದ್ದೇನೆ. ಅದಕ್ಕೆ ಅವರು ಶುಭವಾಗಲಿ ಎಂದಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಬಿ.ಜೆ.ಪಿ.ಯು ರಾಜಧರ್ಮದ ರಾಜಕಾರಣ ಮಾಡುತ್ತದೆ. ಹಿಂದುತ್ವದ ಪ್ರತಿಪಾದನೆ, ಸಾಮಾಜಿಕ ನ್ಯಾಯದ ಒಟ್ಟು ಕಲ್ಪನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಸಾಧು ಸಂತರೆಲ್ಲರೂ ಬಿ.ಜೆ.ಪಿ.ಯನ್ನು ಬೆಂಬಲಿಸಬೇಕಾದ ಅನಿವಾರ್ಯತೆ ಇದೆ ಎಂಬ ಭಾವನೆ ಹೊಂದಿದ್ದಾರೆ. ಆ ಹಿನ್ನೆಲೆಯಲ್ಲಿ ನಾವು ಮತ್ತಷ್ಟು ಪ್ರಖರವಾಗಿ ಕೆಲಸ ಮಾಡಬೇಕು ಎಂಬರ್ಥದಲ್ಲಿ ಸ್ವಾಮೀಜಿ ತಾವು ಸ್ಪರ್ಧೆ ಮಾಡಬೇಕು ಎಂದು ಹೇಳಿದ್ದಾರೆ’ ಎಂದು ಪ್ರತಿಪಾದಿಸಿದರು.</p>.<p>ಭಟ್ಕಳದ ಸಾರದ ಹೊಳೆ ಹಳೆಕೋಟೆ ಶ್ರೀಕ್ಷೇತ್ರ ಹನುಮಂತ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸ್ವಾಮೀಜಿ, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.</p>.<p class="Subhead"><strong>ಸರ್ಕಾರದ ಅಂಗಸಂಸ್ಥೆಗಳು:</strong>‘ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮತ್ತು ನಿರ್ಮಿತಿ ಕೇಂದ್ರಗಳು ಸರ್ಕಾರದ ಅಂಗಸಂಸ್ಥೆಗಳಾಗಿವೆ. ಸರ್ಕಾರದ ಕೆಲಸಗಳು ಯಾವ ಗುಣಮಟ್ಟ ಹೊಂದಿರಬೇಕು ಎಂದು ನಿಯಮವಿದೆಯೋ ಅದರಲ್ಲಿ ಯಾವುದೇ ರಾಜಿಯನ್ನು ಮಾಡಿಕೊಂಡಿಲ್ಲ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಇನ್ನುಮುಂದೆ ಎಲ್ಲ ಕೆಲಸಗಳನ್ನು ಸಂಸ್ಥೆಗಳಿಗೆ ವಹಿಸುತ್ತಾರೆ ಎಂಬ ಭಾವನೆ ಕೆಲವರಿಗೆ ಬಂದ ಹಾಗಿದೆ. ಟೆಂಡರ್ ಕರೆಯುವಂತೆ ಒತ್ತಾಯಿಸುತ್ತಿದ್ದಾರೆ. ಗುತ್ತಿಗೆದಾರರ ಭಾವನೆಗಳನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧರಿಸಲಿದೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>