ಪ್ರತಿದಿನ ನೂರಾರು ನೌಕರರು, ಶಾಲಾ ಮಕ್ಕಳು, ವ್ಯವಹಾರಕ್ಕೆ ಪೇಟೆಗೆ ಬರುವವರು ಇದನ್ನು ಬಳಸಿಕೊಳ್ಳಬೇಕಾಗಿದೆ. ಹೀಗಾಗಿ ಮಳೆಗಾಲದಲ್ಲಿ ತಾತ್ಕಾಲಿಕ ಸೇತುವೆಯ ಮೇಲೆ ನೀರು ಹರಿಯುವುದರಿಂದ ಎರಡೂ ಪಟ್ಟಣಗಳ ಸಂಪರ್ಕ ಕಡಿತಗೊಳ್ಳುತ್ತಿತ್ತು. ಸೇತುವೆಯ ದುರಸ್ತಿ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾದ ಕಾರಣಎರಡೂತಾಲ್ಲೂಕುಗಳ ಜನ ನಿಟ್ಟುಸಿರು ಬಿಡುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳಾದ ಪ್ರಕಾಶ ಮಹಾಲೆ ಮತ್ತು ಮಂಜುನಾಥ ಭಟ್ ತಿಳಿಸಿದ್ದಾರೆ.