ಮಳೆಗಾಲ ಪೂರ್ವದಲ್ಲೇ ಬಿಎಸ್ಎನ್ಎಲ್ ವ್ಯವಸ್ಥೆ ಹದಗೆಟ್ಟಿತ್ತು. ಈಗ ಮಳೆ–ಗಾಳಿಯಿಂದ ಸಂಪರ್ಕ ಇನ್ನಷ್ಟು ಕುಸಿದಿದೆ. ಈ ಸಂದರ್ಭದಲ್ಲಿ ಸಂಸ್ಥೆಗೆ ಮಾರ್ಗದರ್ಶನ ನೀಡಬೇಕಾದ ಸಮಯೋಚಿತ ಜವಾಬ್ದಾರಿಯನ್ನು ಸಂಸದರು ನಿರ್ವಹಿಸಬೇಕಿತ್ತು. ಅದರ ಬದಲಾಗಿ ಅವರು ಸಂಸ್ಥೆಗೆ ಬೈಯುತ್ತ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಗ್ರಾಮೀಣ ಜನರು ಸ್ವಂತ ವೆಚ್ಚದಲ್ಲಿ ಆಪ್ಟಿಕಲ್ ಕೇಬಲ್ ಸಂಪರ್ಕ ಪಡೆಯುತ್ತಿದ್ದಾರೆ. ಇದು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಹೊಣೆ ಯಾರಾಗುತ್ತಾರೆ? ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಈ ಸಂಬಂಧ ಸಾರ್ವಜನಿಕರ ಸಭೆ ಕರೆಯಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.