ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್–ಲಾರಿ ಡಿಕ್ಕಿ: 37 ಜನರಿಗೆ ಗಾಯ

Last Updated 1 ಜನವರಿ 2019, 14:25 IST
ಅಕ್ಷರ ಗಾತ್ರ

ಕುಮಟಾ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಮಣಕಿ ಬಳಿ ಮಂಗಳವಾರ ಬಸ್– ಲಾರಿ ಡಿಕ್ಕಿಯಾಗಿ, ಲಾರಿ ಚಾಲಕನ ಬಲಪಾದ ತುಂಡಾಗಿದೆ.ಬಸ್ ಚಾಲಕ, ನಿರ್ವಾಹಕ ಸೇರಿ ಸುಮಾರು 37 ಜನರು ಗಾಯಗೊಂಡಿದ್ದಾರೆ.

ಲಾರಿ ಚಾಲಕ ತಮಿಳುನಾಡಿನವೇಲು ಮುರುಗನ್ ಎಂಬುವವರ ಪಾದ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಗೋಕರ್ಣದಿಂದ ಸಾಗರಕ್ಕೆ ಹೋಗುವ ಸಾಗರ ಡಿಪೊಬಸ್, ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

‘ಗಾಯಗೊಂಡ ಎಲ್ಲರಿಗೂ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಿ.ಟಿ ಸ್ಕ್ಯಾನಿಂಗ್ ಅಗತ್ಯವುಳ್ಳ ಆರು ಜನರನ್ನುಹೊನ್ನಾವರದ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ ನಾಯ್ಕ ತಿಳಿಸಿದ್ದಾರೆ.

ತೀವ್ರ ಗಾಯಗೊಂಡ 14 ಜನರತುರ್ತು ಚಿಕಿತ್ಸೆಗೆರಾಜ್ಯ ಸಾರಿಗೆ ಇಲಾಖೆಯಿಂದ ಒಟ್ಟು₹50,000 ನೀಡಲಾಗಿದೆ ಎಂದುಘಟಕವ್ಯವಸ್ಥಾಪಕಎಸ್.ಜಿ.ಬಿರಾದಾರ ತಿಳಿಸಿದ್ದಾರೆ.

‘ರಾಷ್ಟ್ರೀಯ ಹೆದ್ದಾರಿ ವಿಸ್ತೀರ್ಣವಾಗದಿದ್ದರೆ ಹೀಗೆ ಪದೇಪದೇ ಅಪಘಾತಗಳು ಉಂಟಾಗಿ ಸಾವು–ನೋವು ಸಂಭವಿಸುವುದು ಸಾಮಾನ್ಯವಾಗುತ್ತದೆ. ವಿಶೇಷವಾಗಿ ಹಬ್ಬಗಳ ಸಂದರ್ಭದಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಿಸಲು ಪೊಲೀಸ್ ಹಾಗೂ ಸಾರಿಗೆ ಇಲಾಖೆ ವಿಶೇಷ ಕಾರ್ಯ ಯೋಜನೆ ರೂಪಿಸಬೇಕು’ ಎಂದು ಮುಖಂಡ ಸೂರಜ ನಾಯ್ಕ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT