<p><span style="font-size:22px;"><strong>ಕಾರವಾರ:</strong>ರಾಜ್ಯದಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಳೆಗಾಲದ ಮಧ್ಯದಲ್ಲೇ ನಡೆಯಲಿವೆ.ಹಳ್ಳ ಕೊಳ್ಳಗಳು ಉಕ್ಕಿ ಹರಿಯುವ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಆದರೆ, ಅದಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಆತಂಕ ಬೇಡ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.</span></p>.<p><span style="font-size:22px;">ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜಾರಿಯಾದ ಲಾಕ್ಡೌನ್ನಿಂದಾಗಿ ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನೂ ಮುಂದೂಡಲಾಗಿತ್ತು. ಪರಿಷ್ಕೃತ ದಿನಾಂಕದ ಪ್ರಕಾರಜೂನ್ 25ರಿಂದ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆದುಕೊಂಡು ಬರಲು ಬಸ್ಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಹರೀಶ ಗಾಂವಕರ್ ತಿಳಿಸಿದ್ದಾರೆ.</span></p>.<p><span style="font-size:22px;">‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಕೆ.ಎಸ್.ಆರ್.ಟಿ.ಸಿ ತನ್ನ ಎಲ್ಲ ಮಾರ್ಗಗಳಲ್ಲಿ ಬಸ್ ಸಂಚಾರವನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಿಲ್ಲ. ಹಾಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಯ ಖಾಸಗಿ ಶಾಲೆಗಳ ಬಸ್ಗಳನ್ನು ಬಳಸಿಕೊಳ್ಳಲಾಗುವುದು. ಈ ಸಂಬಂಧ ಶಾಲೆಗಳ ಆಡಳಿತ ಮಂಡಳಿಗಳಿಗೆ ಪತ್ರ ಬರೆಯಲಾಗಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆಯಿಲ್ಲದಮಾರ್ಗಗಳಲ್ಲಿ ಆ ವಾಹನಗಳು ಸಂಚರಿಸಲಿವೆ’ ಎಂದು ಮಾಹಿತಿ ನೀಡಿದರು.</span></p>.<p><span style="font-size:22px;">‘ಉದಾಹರಣೆಗೆ ಅಂಕೋಲಾ ತಾಲ್ಲೂಕಿನ ಕಮ್ಮಾಣಿಯಂತಹ ಕುಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಹಿಂದಿನ ವರ್ಷಗಳಲ್ಲಿ ಹಾಸ್ಟೆಲ್ಗಳಲ್ಲಿ ಉಳಿದುಕೊಂಡು ಪರೀಕ್ಷೆ ಬರೆಯುತ್ತಿದ್ದರು. ಈಗಲೂ ಅಂತಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುತ್ತದೆ. ಕಮ್ಮಾಣಿಯಿಂದ ಅಚವೆ, ಅಂಗಡಿಬೈಲ್, ಹಿಲ್ಲೂರು, ಮೊಗಟಾ, ಮೊರಳ್ಳಿ ಈ ರೀತಿ ಒಂದೇ ಮಾರ್ಗದಲ್ಲಿ ಹಲವು ಹಳ್ಳಿಗಳಿವೆ. ಅಂತಹ ಮಾರ್ಗಗಳನ್ನೂ ಪಟ್ಟಿಮಾಡಲಾಗಿದೆ’ ಎಂದು ವಿವರಿಸಿದರು.</span></p>.<p><span style="font-size:22px;">ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲ ಶಾಲೆಗಳಮುಖ್ಯ ಶಿಕ್ಷಕರ ಜೊತೆ ಚರ್ಚಿಸಲಾಗಿದೆ. ವಾಹನಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಗೈರು ಹಾಜರಾಗುವುದನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.</span></p>.<p><span style="font-size:22px;"><strong>ಮಾರ್ಗದರ್ಶಿ ಶಿಕ್ಷಕ</strong>:‘ಲಾಕ್ಡೌನ್ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಅರಿತುಕೊಳ್ಳಲು ಪ್ರತಿ ಶಾಲೆಯಲ್ಲೂ ‘ಮಾರ್ಗದರ್ಶಿ ಶಿಕ್ಷಕ’ ಎಂದು ನೇಮಿಸಲಾಗಿದೆ.ಸುಮಾರು 10 ವಿದ್ಯಾರ್ಥಿಗಳ ಸಂಪೂರ್ಣ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ. ಮಕ್ಕಳ ಅಧ್ಯಯನ, ಅಗತ್ಯ ಮಾರ್ಗದರ್ಶನ, ಪರೀಕ್ಷಾ ಕೇಂದ್ರಕ್ಕೆ ಬರುವ ವ್ಯವಸ್ಥೆ ಅಥವಾ ವಾಸ್ತವ್ಯದ ಸೌಕರ್ಯದಬಗ್ಗೆ ಗಮನ ಹರಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.</span></p>.<div class="Subhead"><span style="font-size:22px;">‘ಗೋವಾದಲ್ಲಿ ಪರೀಕ್ಷಾ ಕೇಂದ್ರವಿಲ್ಲ’: ‘ಕೇಂದ್ರಗೃಹ ಇಲಾಖೆಯುಲಾಕ್ಡೌನ್ ನಿಯಮಗಳಲ್ಲಿ ಸಡಿಲಿಕೆ ತಂದು ಅಂತರರಾಜ್ಯ ಪ್ರಯಾಣಕ್ಕೆ ಅವಕಾಶ ನೀಡಿದೆ. ಆದ್ದರಿಂದ ಗೋವಾದಲ್ಲಿ ಪರೀಕ್ಷಾ ಕೇಂದ್ರ ತೆರೆಯುವುದಿಲ್ಲ’ ಎಂದು ಡಿ.ಡಿ.ಪಿ.ಐ ಹರೀಶ ಗಾಂವ್ಕರ್ ತಿಳಿಸಿದರು.</span></div>.<p><span style="font-size:22px;">‘ಅಲ್ಲಿರುವ ವಿದ್ಯಾರ್ಥಿಗಳಿಗೆ ಅಗತ್ಯವಿದ್ದರೆ ಇಲ್ಲಿ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುತ್ತದೆ. ಸಾಮಾನ್ಯವಾಗಿ ಅವರು ಕಾರವಾರ ತಾಲ್ಲೂಕಿನ ಉಳಗಾದ ಕೇಂದ್ರಕ್ಕೆ ಹಾಜರಾಗಬೇಕಿತ್ತು. ಅದರ ಬದಲು ಹತ್ತಿರದ ಕೇಂದ್ರಗಳಾದಚಿತ್ತಾಕುಲಾ ಅಥವಾ ಸದಾಶಿವಗಡದಲ್ಲಿ ಪರೀಕ್ಷೆ ಬರೆಬಹುದು. ಅದೇರೀತಿ, ಗೋವಾ ಗಡಿಪೋಳೆಂವರೆಗೆ ಅಲ್ಲಿನ ಶಾಲಾ ಬಸ್ಗಳಲ್ಲಿ ಬಂದರೆ, ಈಚೆಗೆ ಬರಲು ನಾವು ಬಸ್ ವ್ಯವಸ್ಥೆ ಮಾಡುತ್ತೇವೆ’ ಎಂದರು.</span></p>.<p><span style="font-size: 22px;">**<br /><strong>ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು</strong></span><br /><span style="font-size:22px;">9,580:ಲಾಕ್ಡೌನ್ ಮೊದಲು<br />263:ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯುವರು<br />72:ಬೇರೆ ಜಿಲ್ಲೆಗಳಿಂದ ಕಾರವಾರ ಜಿಲ್ಲೆಗೆ ಬಂದವರು<br />9,389:ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವವರ ಒಟ್ಟು ಸಂಖ್ಯೆ</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size:22px;"><strong>ಕಾರವಾರ:</strong>ರಾಜ್ಯದಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಳೆಗಾಲದ ಮಧ್ಯದಲ್ಲೇ ನಡೆಯಲಿವೆ.ಹಳ್ಳ ಕೊಳ್ಳಗಳು ಉಕ್ಕಿ ಹರಿಯುವ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಆದರೆ, ಅದಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಆತಂಕ ಬೇಡ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.</span></p>.<p><span style="font-size:22px;">ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜಾರಿಯಾದ ಲಾಕ್ಡೌನ್ನಿಂದಾಗಿ ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನೂ ಮುಂದೂಡಲಾಗಿತ್ತು. ಪರಿಷ್ಕೃತ ದಿನಾಂಕದ ಪ್ರಕಾರಜೂನ್ 25ರಿಂದ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆದುಕೊಂಡು ಬರಲು ಬಸ್ಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಹರೀಶ ಗಾಂವಕರ್ ತಿಳಿಸಿದ್ದಾರೆ.</span></p>.<p><span style="font-size:22px;">‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಕೆ.ಎಸ್.ಆರ್.ಟಿ.ಸಿ ತನ್ನ ಎಲ್ಲ ಮಾರ್ಗಗಳಲ್ಲಿ ಬಸ್ ಸಂಚಾರವನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಿಲ್ಲ. ಹಾಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಯ ಖಾಸಗಿ ಶಾಲೆಗಳ ಬಸ್ಗಳನ್ನು ಬಳಸಿಕೊಳ್ಳಲಾಗುವುದು. ಈ ಸಂಬಂಧ ಶಾಲೆಗಳ ಆಡಳಿತ ಮಂಡಳಿಗಳಿಗೆ ಪತ್ರ ಬರೆಯಲಾಗಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆಯಿಲ್ಲದಮಾರ್ಗಗಳಲ್ಲಿ ಆ ವಾಹನಗಳು ಸಂಚರಿಸಲಿವೆ’ ಎಂದು ಮಾಹಿತಿ ನೀಡಿದರು.</span></p>.<p><span style="font-size:22px;">‘ಉದಾಹರಣೆಗೆ ಅಂಕೋಲಾ ತಾಲ್ಲೂಕಿನ ಕಮ್ಮಾಣಿಯಂತಹ ಕುಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಹಿಂದಿನ ವರ್ಷಗಳಲ್ಲಿ ಹಾಸ್ಟೆಲ್ಗಳಲ್ಲಿ ಉಳಿದುಕೊಂಡು ಪರೀಕ್ಷೆ ಬರೆಯುತ್ತಿದ್ದರು. ಈಗಲೂ ಅಂತಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುತ್ತದೆ. ಕಮ್ಮಾಣಿಯಿಂದ ಅಚವೆ, ಅಂಗಡಿಬೈಲ್, ಹಿಲ್ಲೂರು, ಮೊಗಟಾ, ಮೊರಳ್ಳಿ ಈ ರೀತಿ ಒಂದೇ ಮಾರ್ಗದಲ್ಲಿ ಹಲವು ಹಳ್ಳಿಗಳಿವೆ. ಅಂತಹ ಮಾರ್ಗಗಳನ್ನೂ ಪಟ್ಟಿಮಾಡಲಾಗಿದೆ’ ಎಂದು ವಿವರಿಸಿದರು.</span></p>.<p><span style="font-size:22px;">ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲ ಶಾಲೆಗಳಮುಖ್ಯ ಶಿಕ್ಷಕರ ಜೊತೆ ಚರ್ಚಿಸಲಾಗಿದೆ. ವಾಹನಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಗೈರು ಹಾಜರಾಗುವುದನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.</span></p>.<p><span style="font-size:22px;"><strong>ಮಾರ್ಗದರ್ಶಿ ಶಿಕ್ಷಕ</strong>:‘ಲಾಕ್ಡೌನ್ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಅರಿತುಕೊಳ್ಳಲು ಪ್ರತಿ ಶಾಲೆಯಲ್ಲೂ ‘ಮಾರ್ಗದರ್ಶಿ ಶಿಕ್ಷಕ’ ಎಂದು ನೇಮಿಸಲಾಗಿದೆ.ಸುಮಾರು 10 ವಿದ್ಯಾರ್ಥಿಗಳ ಸಂಪೂರ್ಣ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ. ಮಕ್ಕಳ ಅಧ್ಯಯನ, ಅಗತ್ಯ ಮಾರ್ಗದರ್ಶನ, ಪರೀಕ್ಷಾ ಕೇಂದ್ರಕ್ಕೆ ಬರುವ ವ್ಯವಸ್ಥೆ ಅಥವಾ ವಾಸ್ತವ್ಯದ ಸೌಕರ್ಯದಬಗ್ಗೆ ಗಮನ ಹರಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.</span></p>.<div class="Subhead"><span style="font-size:22px;">‘ಗೋವಾದಲ್ಲಿ ಪರೀಕ್ಷಾ ಕೇಂದ್ರವಿಲ್ಲ’: ‘ಕೇಂದ್ರಗೃಹ ಇಲಾಖೆಯುಲಾಕ್ಡೌನ್ ನಿಯಮಗಳಲ್ಲಿ ಸಡಿಲಿಕೆ ತಂದು ಅಂತರರಾಜ್ಯ ಪ್ರಯಾಣಕ್ಕೆ ಅವಕಾಶ ನೀಡಿದೆ. ಆದ್ದರಿಂದ ಗೋವಾದಲ್ಲಿ ಪರೀಕ್ಷಾ ಕೇಂದ್ರ ತೆರೆಯುವುದಿಲ್ಲ’ ಎಂದು ಡಿ.ಡಿ.ಪಿ.ಐ ಹರೀಶ ಗಾಂವ್ಕರ್ ತಿಳಿಸಿದರು.</span></div>.<p><span style="font-size:22px;">‘ಅಲ್ಲಿರುವ ವಿದ್ಯಾರ್ಥಿಗಳಿಗೆ ಅಗತ್ಯವಿದ್ದರೆ ಇಲ್ಲಿ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುತ್ತದೆ. ಸಾಮಾನ್ಯವಾಗಿ ಅವರು ಕಾರವಾರ ತಾಲ್ಲೂಕಿನ ಉಳಗಾದ ಕೇಂದ್ರಕ್ಕೆ ಹಾಜರಾಗಬೇಕಿತ್ತು. ಅದರ ಬದಲು ಹತ್ತಿರದ ಕೇಂದ್ರಗಳಾದಚಿತ್ತಾಕುಲಾ ಅಥವಾ ಸದಾಶಿವಗಡದಲ್ಲಿ ಪರೀಕ್ಷೆ ಬರೆಬಹುದು. ಅದೇರೀತಿ, ಗೋವಾ ಗಡಿಪೋಳೆಂವರೆಗೆ ಅಲ್ಲಿನ ಶಾಲಾ ಬಸ್ಗಳಲ್ಲಿ ಬಂದರೆ, ಈಚೆಗೆ ಬರಲು ನಾವು ಬಸ್ ವ್ಯವಸ್ಥೆ ಮಾಡುತ್ತೇವೆ’ ಎಂದರು.</span></p>.<p><span style="font-size: 22px;">**<br /><strong>ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು</strong></span><br /><span style="font-size:22px;">9,580:ಲಾಕ್ಡೌನ್ ಮೊದಲು<br />263:ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯುವರು<br />72:ಬೇರೆ ಜಿಲ್ಲೆಗಳಿಂದ ಕಾರವಾರ ಜಿಲ್ಲೆಗೆ ಬಂದವರು<br />9,389:ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವವರ ಒಟ್ಟು ಸಂಖ್ಯೆ</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>