ಚುನಾವಣಾಧಿಕಾರಿ ಸಭೆ:ಮತ ಎಣಿಕೆ ಸಂಬಂಧ ಚುನಾವಣಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಸಭೆಯನ್ನು ಭಾನುವಾರ ಇಲ್ಲಿ ನಡೆಸಿದರು. ಮತ ಎಣಿಕೆಯ ಸಂದರ್ಭದಲ್ಲಿ ಶಾಂತತೆ ಕಾಪಾಡಿಕೊಳ್ಳುವಂತೆ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ, ಅಧಿಕಾರಿ, ಸಿಬ್ಬಂದಿಗೆ ಸಹಕಾರ ನೀಡುವಂತೆ ಕೋರಿದರು. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ಡಿವೈಎಸ್ಪಿ ವ್ಯಾಲೆಂಟೈನ್ ಡಿಸೋಜಾ, ಪೊಲೀಸ್ ನಿರೀಕ್ಷಕ ಗಿರೀಶ್ ಇದ್ದರು.