<p><strong>ಶಿರಸಿ: </strong>ಸಚಿವ ಸಂಪುಟ ವಿಸ್ತರಣೆ ನಿರಂತರ ಪ್ರಕ್ರಿಯೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡುವವರಿಗೆ ಮುಖ್ಯಮಂತ್ರಿ ಖಾತೆ ನೀಡಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಸಕ್ಕರೆ ಖಾತೆ ಹಿಂಪಡೆದಿದ್ದಕ್ಕೆ ಬೇಸರವಿಲ್ಲ. ಖಾತೆ ನೀಡುವುದು, ಹಿಂಪಡೆಯುವುದು ಮುಖ್ಯಮಂತ್ರಿ ವಿವೇಚನಕ್ಕೆ ಬಿಟ್ಟ ವಿಚಾರ.ಅವರಿಗೆ ಪರಮಾಧಿಕಾರವಿದೆ' ಎಂದರು.</p>.<p>'ಸಂಪುಟದಲ್ಲಿರುವ ಯಾವ ಸಚಿವರಿಗೂ ಅಸಮಾಧಾನವಿಲ್ಲ. ಸಚಿವ ಸ್ಥಾನ ಸಿಗದಿದ್ದವರಲ್ಲೂ ಬೇಸರವಿಲ್ಲ' ಎಂದರು.</p>.<p>'ಪಕ್ಷದ ಹೈಕಮಾಂಡ್ ಎಲ್ಲವನ್ನೂ ನಿಭಾಯಿಸುತ್ತದೆ. ಮುಖ್ಯಮಂತ್ರಿ ಜತೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ' ಎಂದರು.</p>.<p>'ಕದಂಬೋತ್ಸವ, ಜಾತ್ರೆಗಳನ್ನೆಲ್ಲ ಸದ್ಯ ನಡೆಸುವ ಯೋಚನೆ ಸದ್ಯಕ್ಕಿಲ್ಲ. ಜನರ ಆರೋಗ್ಯ ಕಾಪಾಡುವುದು ಈಗಿನ ಆದ್ಯತೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಸಚಿವ ಸಂಪುಟ ವಿಸ್ತರಣೆ ನಿರಂತರ ಪ್ರಕ್ರಿಯೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡುವವರಿಗೆ ಮುಖ್ಯಮಂತ್ರಿ ಖಾತೆ ನೀಡಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಸಕ್ಕರೆ ಖಾತೆ ಹಿಂಪಡೆದಿದ್ದಕ್ಕೆ ಬೇಸರವಿಲ್ಲ. ಖಾತೆ ನೀಡುವುದು, ಹಿಂಪಡೆಯುವುದು ಮುಖ್ಯಮಂತ್ರಿ ವಿವೇಚನಕ್ಕೆ ಬಿಟ್ಟ ವಿಚಾರ.ಅವರಿಗೆ ಪರಮಾಧಿಕಾರವಿದೆ' ಎಂದರು.</p>.<p>'ಸಂಪುಟದಲ್ಲಿರುವ ಯಾವ ಸಚಿವರಿಗೂ ಅಸಮಾಧಾನವಿಲ್ಲ. ಸಚಿವ ಸ್ಥಾನ ಸಿಗದಿದ್ದವರಲ್ಲೂ ಬೇಸರವಿಲ್ಲ' ಎಂದರು.</p>.<p>'ಪಕ್ಷದ ಹೈಕಮಾಂಡ್ ಎಲ್ಲವನ್ನೂ ನಿಭಾಯಿಸುತ್ತದೆ. ಮುಖ್ಯಮಂತ್ರಿ ಜತೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ' ಎಂದರು.</p>.<p>'ಕದಂಬೋತ್ಸವ, ಜಾತ್ರೆಗಳನ್ನೆಲ್ಲ ಸದ್ಯ ನಡೆಸುವ ಯೋಚನೆ ಸದ್ಯಕ್ಕಿಲ್ಲ. ಜನರ ಆರೋಗ್ಯ ಕಾಪಾಡುವುದು ಈಗಿನ ಆದ್ಯತೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>