ಅಂಕೋಲಾ: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯೊಬ್ಬರು ತಾಲ್ಲೂಕಿನ ಹೊಸೂರು ಸೇತುವೆ ಬಳಿ ಗುರುವಾರ ಕಾರು ಪಲ್ಟಿಯಾಗಿ ಮೃತಪಟ್ಟಿದ್ದಾರೆ.
ಭಟ್ಕಳದ ಶಮಾಜ್ ಗೋಲ್ಟೆ (22) ಮೃತಪಟ್ಟವರು. ಅಪಘಾತದಲ್ಲಿ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಬಾಹ್ಯ ವಿದ್ಯಾರ್ಥಿಯಾಗಿದ್ದ ಅವರು, ಭಟ್ಕಳದಿಂದ ಕಾರವಾರದ ಮದರಸಾ ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದರು.
ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಒಬ್ಬ ಪರೀಕ್ಷೆ ಬರೆಯಲು ಕಾರವಾರಕ್ಕೆ ಹೋಗಿದ್ದಾರೆ. ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.