ಎಲ್ಲಾ ಘಟನೆ ಸಿನಿಮೀಯ ರೀತಿಯಲ್ಲಿ ನಡೆದಿದ್ದು, ಗೌರವ ಅವರೇ ಕಾರು ಚಲಾಯಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಅತಿ ವೇಗದಲ್ಲಿದ್ದ ಕಾರನ್ನು ಚೌಡಗೇರಿಯ ಶಾಲೆಯ ಬಳಿ ತಿರುಗಿಸಲು ಪ್ರಯತ್ನಿಸಿದಾಗ ಕಾರು ನಿಯಂತ್ರಣ ತಪ್ಪಿತು. 10 ಅಡಿಗಿಂತ ಎತ್ತರಕ್ಕೆ ಹಾರಿ ಮರದ ಎರಡು ಟೊಂಗೆಗಳ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಟೊಂಗೆ ಮರಿದು, ನೀರಿನಿಂದ ತುಂಬಿದ್ದ ಕಲ್ಲು ಕ್ವಾರಿಯಲ್ಲಿ ಕಾರು ಉಲ್ಟಾ ಬಿದ್ದಿದೆ.