ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿರುವ ಭಟ್ಕಳದಲ್ಲಿ ಆಗಾಗ ಅಪರಾಧ ಚಟುವಟಿಕೆಗಳು ನಡೆಯುತ್ತಿರುತ್ತವೆ. ಪಟ್ಟಣ ವ್ಯಾಪ್ತಿಯಲ್ಲಿ ಒಂದು ಸಣ್ಣ ಅಪಘಾತವಾದರೂ ಕ್ಷಣದಲ್ಲಿ ನೂರಾರು ಜನ ಸ್ಥಳದಲ್ಲಿ ಜಮಾವಣೆಗೊಳ್ಳುತ್ತಾರೆ. ಇಂತಹ ಪ್ರದೇಶದಲ್ಲಿ ಅಪರಾಧ ಚಟುವಟಿಕೆಗಳ ಹಾಗೂ ವಾಹನಗಳ ಚಲನವಲನಗಳ ಮೇಲೆ ನಿಗಾ ಇರಿಸಲು 2015ರಲ್ಲಿ ₹ 28 ಲಕ್ಷ ಅನುದಾನದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.