ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಎಸ್.ಐ. ಚಿಕಿತ್ಸಾಲಯಕ್ಕೆ ತಾತ್ವಿಕ ಅನುಮೋದನೆ

Last Updated 2 ಅಕ್ಟೋಬರ್ 2021, 2:13 IST
ಅಕ್ಷರ ಗಾತ್ರ

ಶಿರಸಿ: ಸಂಸದ ಅನಂತಕುಮಾರ ಹೆಗಡೆ ಮನವಿಗೆ ಸ್ಪಂದಿಸಿ ಶಿರಸಿ ಹಾಗೂ ಕುಮಟಾದಲ್ಲಿ ಇ.ಎಸ್.ಐ. ಚಿಕಿತ್ಸಾಲಯ ಸ್ಥಾಪನೆಗೆ ತಾತ್ವಿಕ ಅನುಮೋದನೆ ನೀಡಿದ್ದಾಗಿ ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಸಂಸದರಿಗೆ ಪತ್ರ ಬರೆದಿದ್ದಾರೆ.

‘ರಾಜ್ಯ ಸರ್ಕಾರದಿಂದ ಶಿರಸಿ, ಕುಮಟಾದಲ್ಲಿ ಚಿಕಿತ್ಸಾಲಯ ಸ್ಥಾಪನೆಗೆ ಅನುಮತಿ ಕೋರಿ ಪ್ರಸ್ತಾವ ಸಲ್ಲಿಕೆಯಾಗಿತ್ತು. ಪ್ರಸ್ತಾವಿತ ಸ್ಥಳ ಜನಸಂಖ್ಯೆ, ಕಾರ್ಮಿಕರ ಸಂಖ್ಯೆ ಆಧಾರದಲ್ಲಿ ಇ.ಎಸ್.ಐ. ನಿಯಮಾವಳಿ ಪ್ರಕಾರ ಚಿಕಿತ್ಸಾಲಯ ಸ್ಥಾಪನೆಗೆ ಅರ್ಹವಾಗಿವೆ. ಹೀಗಾಗಿ ಅನುಮೋದನೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ’ ಎಂದು ಸಂಸದರ ಕಚೇರಿ ನೀಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT