‘2017ರಲ್ಲಿ ರಾಷ್ಟ್ರಪತಿ ಚುನಾವಣೆಯ ಸಂದರ್ಭದಲ್ಲಿ ಕೂಡ ನಾಮಪತ್ರ ಸಲ್ಲಿಸಲು ಬಯಸಿದೆ. ಆದರೆ, ಮತ್ತದೇ ಸಮಸ್ಯೆ ಎದುರಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತದಲ್ಲಿ, ದೇಶದ ಮೊದಲ ಪ್ರಜೆಯ ಆಯ್ಕೆ ಮಾಡಲು ಇಂಥ ಕ್ರಮ ಅನುಸರಿಸುವುದು ಸರಿಯಲ್ಲ. ಜನಸಾಮಾನ್ಯರಿಗೂ ಸ್ಪರ್ಧಿಸಲು ಅವಕಾಶ ಸಿಗಬೇಕು. ಈ ಬಗ್ಗೆ 2018ರಲ್ಲಿ ನಾನು ಸುಪ್ರೀಂಕೋರ್ಟ್ಗೆ ಮೊದಲು ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿತ್ತು. ಆದರೂ ಈ ವರ್ಷ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದು ಸ್ವೀಕೃತವಾಗಿದೆ’ ಎಂದು ವಿವರಿಸಿದರು.