ಕಾರವಾರ: ಜಿಲ್ಲೆಯಲ್ಲಿ ಬಾಕಿಯಿರುವ ವಿವಿಧ ಇಲಾಖೆಗಳ ನೂರಾರು ಕೋಟಿ ರೂಪಾಯಿಗಳ ಬಿಲ್ ಪಾವತಿಸುವುದು, ಟೆಂಡರ್ ಗುತ್ತಿಗೆ ಪದ್ಧತಿಯನ್ನು ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಉತ್ತರ ಕನ್ನಡ ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಂಘದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.