ಹೆಬಳೆ ಗ್ರಾಮ ಪಂಚಾಯಿತಿಯ ಗಾಂಧಿನಗರ, ಹೆಬಳೆಯಲ್ಲಿ ಮೊಟ್ಟೆ ಎಸೆದ ಕಿಡಿಗೇಡಿಗಳು ಹನುಮಾನ್ ನಗರದಲ್ಲಿ ಆಟೊರಿಕ್ಷಾ ಚಾಲಕ ಕೃಷ್ಣ ಮಾಸ್ತಪ್ಪ ನಾಯ್ಕ ಎಂಬುವವರ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ. ಪುರವರ್ಗ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆ ಮೊಟ್ಟೆ ಎಸೆದಿದ್ದಾರೆ. ಆಗ ಅವನ ಸಹೋದರ ಕಿಡಿಗೇಡಿಗಳನ್ನು ಬೆನ್ನಟ್ಟಿ ಬಂದು ಪಟ್ಟಣದ ರಾಘವೇಂದ್ರ ಮಠದ ಬಳಿ ಒಬ್ಬನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಇಬ್ಬರು ಪರಾರಿಯಾಗಿದ್ದಾರೆ.