ಶಿರಸಿ: ಸಿದ್ದಾಪುರದಲ್ಲಿ ರಾಮಕೃಷ್ಣ ಹೆಗಡೆ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಅನುಮೋದನೆ ನೀಡಬೇಕು ಎಂಬ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬೇಡಿಕೆಗೆ ಮುಖ್ಯಮಂತ್ರಿ ಸ್ಪಂದಿಸುವ ಭರವಸೆ ನೀಡಿದ್ದಾರೆ.
ಈ ಕುರಿತು ವಿಧಾನಸಭಾ ಅಧ್ಯಕ್ಷರ ಕಾರ್ಯಾಲಯ ಪ್ರಕಟಣೆ ನೀಡಿದ್ದು, ‘ಅಧ್ಯಯನ ಪೀಠಕ್ಕೆ ಬಜೆಟ್ನಲ್ಲಿ ಅನುಮೋದನೆ ನೀಡುವಂತೆ ಬರೆದ ಪತ್ರಕ್ಕೆ ಮುಖ್ಯಮಂತ್ರಿ ಅವರು ಕ್ರಮಕೈಗೊಳ್ಳಲು ನಿರ್ದೇಶನ ನೀಡಿದ್ದಾಗಿ ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಪತ್ರ ಬರೆದು ತಿಳಿಸಿದ್ದಾರೆ’ ಎಂದು ಹೇಳಿದೆ.