ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಪೀಡಿತ ಭಟ್ಕಳಕ್ಕೆ ಸಂಜೆ 4ಕ್ಕೆ ಭೇಟಿ ನೀಡಲಿದ್ದಾರೆ ಸಿಎಂ ಬೊಮ್ಮಾಯಿ

Last Updated 3 ಆಗಸ್ಟ್ 2022, 6:45 IST
ಅಕ್ಷರ ಗಾತ್ರ

ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳಕ್ಕೆ ಬುಧವಾರ ಸಂಜೆ 4ಕ್ಕೆ ಭೇಟಿ ನೀಡಲಿದ್ದಾರೆ. ಕಂದಾಯ ಸಚಿವ ಆರ್. ಅಶೋಕ ಅವರೂ ಜೊತೆಗಿರಲಿದ್ದಾರೆ.

ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ ಸಂಜೆ 6ಕ್ಕೆ ವಾಪಸಾಗಲಿದ್ದಾರೆ.

ಸೋಮವಾರ ತಡರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಭಟ್ಕಳದಲ್ಲಿ ಹಿಂದೆಂದೂ ಕಂಡರಿಯದಂಥ ಪ್ರವಾಹ ಉಂಟಾಗಿತ್ತು. ದಾಖಲೆಯ 52 ಸೆಂ.ಮೀ ಮಳೆಯಾಗಿತ್ತು.

ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT