‘ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ₹ 160 ಕೋಟಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡವು ನಿರ್ಮಾಣ ಹಂತದಲ್ಲಿದೆ. ಕ್ಯಾನ್ಸರ್, ಟ್ರಾಮಾ ಸೆಂಟರ್ಗಳೂ ಸಿದ್ಧವಾಗುತ್ತಿವೆ. ಆದರೆ, ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು, ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುತ್ತದೆ. ಹೃದ್ರೋಗ ತಜ್ಞರು, ನರರೋಗ ತಜ್ಞರ ಅಗತ್ಯವಿದೆ. ಬಹಳ ತುರ್ತಾಗಿ ಚಿಕಿತ್ಸೆ ಕೊಡಿಸಲು ಸುಸಜ್ಜಿತ ಆಸ್ಪತ್ರೆ ಬೇಕೇ ಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದೇನೆ’ ಎಂದು ತಿಳಿಸಿದರು.