ಈ ಚುನಾವಣೆಯು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಡುವಿನ ಚುನಾವಣೆಯಲ್ಲ. ಇದು ಮತದಾರರಿಗೆ ಮಾಡಿರುವ ಮೋಸ ಮತ್ತು ನಿಷ್ಠೆ, ಭ್ರಷ್ಟತೆ ಮತ್ತು ಪ್ರಾಮಾಣಿಕತೆ ನಡುವಿನ ಚುನಾವಣೆಯಾಗಿದೆ. ಪಕ್ಷಾಂತರ ಮಾಡುವ ರಾಜಕಾರಣಿಗಳಿಗೆ ಬುದ್ಧಿಕಲಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಹೊಡೆತ ಬೀಳುತ್ತದೆ. ಒಂದು ತಿಂಗಳ ಈಚಿನ ರಾಜಕೀಯ ಬೆಳವಣಿಗೆ ಗಮನಿಸಿದರೆ, ಮಹಾರಾಷ್ಟ್ರ, ಹರಿಯಾಣದಲ್ಲಿ ಪಕ್ಷಾಂತರಿಗಳಿಗೆ ಜನರು ಮಣ್ಣುಮುಕ್ಕಿಸಿದ್ದಾರೆ ಎಂದು ಹೇಳಿದರು.ಪಕ್ಷದ ಪ್ರಮುಖರಾದ ಜಗದೀಶ ಗೌಡ, ಆರ್.ಎಂ.ಹೆಗಡೆ, ಎಸ್.ಕೆ.ಭಾಗವತ, ರವೀಂದ್ರ ನಾಯ್ಕ, ದೀಪಕ ದೊಡ್ಡೂರು ಇದ್ದರು.