ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡಿಕೆ ಮಾರುಕಟ್ಟೆಗೆ ಸಹಕಾರ ಸಚಿವರ ಭೇಟಿ

Last Updated 6 ಸೆಪ್ಟೆಂಬರ್ 2021, 17:29 IST
ಅಕ್ಷರ ಗಾತ್ರ

ಶಿರಸಿ: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೋಮವಾರ ಇಲ್ಲಿನ ಟಿಎಸ್ಎಸ್ ಸಂಸ್ಥೆಯ ಅಡಿಕೆ ಮಾರುಕಟ್ಟೆಗೆ ಭೇಟಿ ನೀಡಿ ವ್ಯಾಪಾರ ಚಟುವಟಿಕೆ ಮತ್ತು ವಿವಿಧ ಬಗೆಯ ಅಡಿಕೆಯ ಕುರಿತು ತಿಳಿದುಕೊಂಡರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಕೆಂಪಡಿಕೆ, ಚಾಲಿ ಇನ್ನಿತರ ಅಡಿಕೆಯ ಕುರಿತು ಸಚಿವರಿಗೆ ವಿವರಿಸಿದರು. ಬಳಿಕ ಸುಪರ್ ಮಾರ್ಕೆಟ್ ವೀಕ್ಷಣೆಯನ್ನೂ ನಡೆಸಿದರು.

‘ಸಹಕಾರ ಕ್ಷೇತ್ರ ಈಚೆಗೆ ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ. ಈ ನಡುವೆಯೂ ಟಿಎಸ್ಎಸ್‍ನಂತಹ ಸಂಸ್ಥೆ ನಿರಂತರ ಪ್ರಗತಿ ಕಾಣುತ್ತಿರುವುದು ಆಶಾದಾಯಕ ಬೆಳವಣಿಗೆ’ ಎಂದು ಸಚಿವ ಸೋಮಶೇಖರ್ ಹೇಳಿದರು.

ಸಂಸ್ಥೆಯ ಉಪಾಧ್ಯಕ್ಷ ರಾಮಕೃಷ್ಣ ಎಸ್.ಹೆಗಡೆ ಕಡವೆ, ಪ್ರಧಾನ ವ್ಯವಸ್ಥಾಪಕ ರವೀಶ ಹೆಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT