<p><strong>ಕಾರವಾರ</strong>: ‘ಸರೋಜಿನಿ ಮಹಿಷಿ ವರದಿಯನ್ನು ಆಧರಿಸಿ ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ರಾಜ್ಯ ಸರ್ಕಾರವು ಬದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಹಮ್ಮಿಕೊಳ್ಳಲಾದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ರಾಜ್ಯದ ಏಕೀಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೊಡುಗೆ ಅಪಾರವಾದುದು. ಇಲ್ಲಿನ ಜನ ಅತ್ಯಂತ ಪ್ರಜ್ಞಾವಂತರು ಹಾಗೂ ಭಾಷೆ, ನೆಲವನ್ನು ಆರಾಧಿಸುವವರು. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರವು ವಿಶೇಷ ಗಮನ ಹರಿಸಿ ಸವಲತ್ತುಗಳನ್ನು ನೀಡುತ್ತಿದೆ’ ಎಂದು ಅವರು ಹೇಳಿದರು.</p>.<p>ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ತುಕಡಿ, ಕಾರವಾರ ಅರಣ್ಯ ಇಲಾಖೆ ಹಾಗೂ ಗೃಹರಕ್ಷಕ ದಳದಚೆಂಡಿಯಾ ಘಟಕದ ತುಕಡಿಗಳ ಸದಸ್ಯರು ಪಥಸಂಚಲನ ನಡೆಸಿಕೊಟ್ಟರು. ಚಿತ್ತಾಕುಲಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶೈಲಾ ಸಾಳುಂಕೆ ಕಾರ್ಯಕ್ರಮ ನಿರೂಪಿಸಿದರು.</p>.<p><strong>‘ಬೆಳಗಾವಿ ನಮ್ಮ ಅವಿಭಾಜ್ಯ ಅಂಗ’: </strong>‘ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಮರಾಠಿಗರು ಮಹಾರಾಷ್ಟ್ರದ ರಾಜಕಾರಣಕ್ಕಾಗಿ ಅಲ್ಲಿನ ಪ್ರಚೋದನೆಯಿಂದ ಪುಂಡಾಟವನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಆದರೆ, ಅದು ಈವರೆಗೆ ಫಲಶ್ರುತಿ ಕಾಣಲಿಲ್ಲ. ಮುಂದೆಯೂ ಯಶಸ್ವಿಯಾಗದು’ ಎಂದು ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ ಹೇಳಿದರು.</p>.<p>‘ಹಿಂದೆ ವಿಧಾನಸಭೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂ.ಇ.ಎಸ್) ಐವರು ಶಾಸಕರಿದ್ದರು. ಈಗ ಆ ಪಕ್ಷದ ಒಬ್ಬರೂ ಶಾಸಕರಿಲ್ಲ. ಅವರ ಹಿಡಿತ ಅಷ್ಟು ಕೆಳಗೆ ಹೋಗಿದೆ. ಒಬ್ಬರೂ ಶಾಸಕರನ್ನು ಹೊಂದಿರದ ಎಂ.ಇ.ಎಸ್ ಬೆಳಗಾವಿ ತಮ್ಮದು ಎಂದು ಕೂಗುವುದರಲ್ಲಿ ಯಾವ ನ್ಯಾಯವೂ ಇಲ್ಲ’ ಎಂದು ಟೀಕಿಸಿದರು.</p>.<p>ಶಾಸಕಿ ರೂಪಾಲಿ ನಾಯ್ಕ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಕಾರವಾರ ಉಪವಿಭಾಗಾಧಿಕಾರಿ ಎಂ.ಪ್ರಿಯಾಂಗಾ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಸರೋಜಿನಿ ಮಹಿಷಿ ವರದಿಯನ್ನು ಆಧರಿಸಿ ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ರಾಜ್ಯ ಸರ್ಕಾರವು ಬದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಹಮ್ಮಿಕೊಳ್ಳಲಾದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ರಾಜ್ಯದ ಏಕೀಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೊಡುಗೆ ಅಪಾರವಾದುದು. ಇಲ್ಲಿನ ಜನ ಅತ್ಯಂತ ಪ್ರಜ್ಞಾವಂತರು ಹಾಗೂ ಭಾಷೆ, ನೆಲವನ್ನು ಆರಾಧಿಸುವವರು. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರವು ವಿಶೇಷ ಗಮನ ಹರಿಸಿ ಸವಲತ್ತುಗಳನ್ನು ನೀಡುತ್ತಿದೆ’ ಎಂದು ಅವರು ಹೇಳಿದರು.</p>.<p>ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ತುಕಡಿ, ಕಾರವಾರ ಅರಣ್ಯ ಇಲಾಖೆ ಹಾಗೂ ಗೃಹರಕ್ಷಕ ದಳದಚೆಂಡಿಯಾ ಘಟಕದ ತುಕಡಿಗಳ ಸದಸ್ಯರು ಪಥಸಂಚಲನ ನಡೆಸಿಕೊಟ್ಟರು. ಚಿತ್ತಾಕುಲಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶೈಲಾ ಸಾಳುಂಕೆ ಕಾರ್ಯಕ್ರಮ ನಿರೂಪಿಸಿದರು.</p>.<p><strong>‘ಬೆಳಗಾವಿ ನಮ್ಮ ಅವಿಭಾಜ್ಯ ಅಂಗ’: </strong>‘ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಮರಾಠಿಗರು ಮಹಾರಾಷ್ಟ್ರದ ರಾಜಕಾರಣಕ್ಕಾಗಿ ಅಲ್ಲಿನ ಪ್ರಚೋದನೆಯಿಂದ ಪುಂಡಾಟವನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಆದರೆ, ಅದು ಈವರೆಗೆ ಫಲಶ್ರುತಿ ಕಾಣಲಿಲ್ಲ. ಮುಂದೆಯೂ ಯಶಸ್ವಿಯಾಗದು’ ಎಂದು ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ ಹೇಳಿದರು.</p>.<p>‘ಹಿಂದೆ ವಿಧಾನಸಭೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂ.ಇ.ಎಸ್) ಐವರು ಶಾಸಕರಿದ್ದರು. ಈಗ ಆ ಪಕ್ಷದ ಒಬ್ಬರೂ ಶಾಸಕರಿಲ್ಲ. ಅವರ ಹಿಡಿತ ಅಷ್ಟು ಕೆಳಗೆ ಹೋಗಿದೆ. ಒಬ್ಬರೂ ಶಾಸಕರನ್ನು ಹೊಂದಿರದ ಎಂ.ಇ.ಎಸ್ ಬೆಳಗಾವಿ ತಮ್ಮದು ಎಂದು ಕೂಗುವುದರಲ್ಲಿ ಯಾವ ನ್ಯಾಯವೂ ಇಲ್ಲ’ ಎಂದು ಟೀಕಿಸಿದರು.</p>.<p>ಶಾಸಕಿ ರೂಪಾಲಿ ನಾಯ್ಕ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಕಾರವಾರ ಉಪವಿಭಾಗಾಧಿಕಾರಿ ಎಂ.ಪ್ರಿಯಾಂಗಾ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>